ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳು ವಿರೂಪಾಕ್ಷಪ್ಪ 3 ತಿಂಗಳ ಹಿಂದಷ್ಟೇ ಪುತ್ರರ ಹೆಸರಿನಲ್ಲಿ ಗುಟ್ಕಾ ಕಂಪನಿ ಆರಂಭಿಸಿದ್ದರು.
ಅಜ್ಞಾತ ಸ್ಥಳದಲ್ಲಿ ಅಡಗಿರುವ ಮಾಡಾಳು ವಿರೂಪಾಕ್ಷಪ್ಪ ನಿವಾಸದಲ್ಲಿ ಲೋಕಾಯುಕ್ತರ ದಾಳಿ ವೇಳೆ ಹಲವು ಮಹತ್ವದ ದಾಖಲೆ ಪತ್ರಗಳು ಪತ್ತೆಯಾಗಿವೆ ಎನ್ನಲಾಗಿದೆ.
ಚನ್ನಗಿರಿ ಸಮೀಪದ ಚನ್ನೇಶಪುರದಲ್ಲಿರುವ ಶಾಸಕರ ಮನೆ ಮೇಲೆ ದಾಳಿ ನಡೆಸಿದಾಗಲು ದೊಡ್ಡ ಪ್ರಮಾಣದಲ್ಲಿ ಆಸ್ತಿ ಪತ್ರಗಳು ಹಾಗೂ ಚಿನ್ನಾಭರಣ ಪತ್ತೆಯಾಗಿದೆ.
ಜೊತೆಗೆ ಅವರು ಬಂಧನ ಭೀತಿಯನ್ನೂ ಎದುರಿಸುತ್ತಿದ್ದಾರೆ.
ಇದರ ಮಧ್ಯೆ ಮಾಡಾಳು ವಿರೂಪಾಕ್ಷಪ್ಪ ತಮ್ಮ ಮೂವರು ಪುತ್ರರ ಹೆಸರಿನಲ್ಲಿ ಗುಟ್ಕಾ ಕಂಪನಿಯನ್ನು ಆರಂಭಿಸಿರುವುದು ಬೆಳಕಿಗೆ ಬಂದಿದೆ, ಎಂ ಆರ್ ಪಿ ಪಾನ್ ಮಸಾಲ ಹೆಸರಿನ ಇದರಲ್ಲಿ ಅವರ ಮೂವರ ಪುತ್ರರ ಹೆಸರಿನ ಆರಂಭದ ಅಕ್ಷರಗಳಿವೆ ಎನ್ನಲಾಗಿದೆ.
ಅಜ್ಞಾತ ಸ್ಥಳದಲ್ಲಿ ಅಡಗಿರುವ ಮಾಡಾಳು ವಿರೂಪಾಕ್ಷಪ್ಪ ನಿವಾಸದಲ್ಲಿ, ಲೋಕಾಯುಕ್ತರ ದಾಳಿ ವೇಳೆ ಹಲವು ಮಹತ್ವದ ದಾಖಲೆ ಪತ್ರಗಳು ಪತ್ತೆಯಾಗಿವೆ ಎನ್ನಲಾಗಿದೆ.
ಚನ್ನಗಿರಿ ಸಮೀಪದ ಚನ್ನೇಶಪುರದಲ್ಲಿರುವ ಶಾಸಕರ ಮನೆ ಮೇಲೆ ದಾಳಿ ನಡೆಸಿದಾಗಲು ದೊಡ್ಡ ಪ್ರಮಾಣದಲ್ಲಿ ಆಸ್ತಿ ಪತ್ರಗಳು ಹಾಗೂ ಚಿನ್ನಾಭರಣ ಪತ್ತೆಯಾಗಿದೆ.
ವಿರೂಪಾಕ್ಷಪ್ಪನವರ ಪುತ್ರ ಮಾಡಾಳು ಮಲ್ಲಿಕಾರ್ಜುನ, ರಾಜಣ್ಣ ಅಲಿಯಾಸ್ ಪ್ರವೀಣ ಹಾಗೂ ಪ್ರಶಾಂತ್ ಹೆಸರಿನಲ್ಲಿ ಎಂ ಆರ್ ಪಿ ಪಾನ್ ಮಸಾಲ ಘಟಕವನ್ನು ಸ್ವಗ್ರಾಮ ಚನ್ನೇಶಪುರದಲ್ಲಿ ಎರಡು ತಿಂಗಳ ಹಿಂದಷ್ಟೇ ಆರಂಭಿಸಿದ್ದಾರೆ, ಚನ್ನಗಿರಿ ಸುತ್ತಮುತ್ತಲಿನ ಭಾಗದಲ್ಲಿ ಪ್ರತಿಯೊಂದು ಬೀಡಾ, ಗೂಡಂಗಡಿಗಳಲ್ಲಿ ಇದನ್ನೇ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.ಇದನ್ನು ಓದಿ –ಬೆಂಗಳೂರಿನಲ್ಲಿ 18 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಹೆಲ್ತ್ ಇನ್ಸ್ ಪೆಕ್ಟರ್
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

#ChennagiriMLA #Virupakshappa #Gutkacompany #Kannadanews #thenewsnap #news #Latestnews









More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು