Main News

ಮಾದಪ್ಪನ ಹುಂಡಿಯಲ್ಲಿ 54 ದಿನಕ್ಕೆ 2.21 ಕೋಟಿ ರು. ಸಂಗ್ರಹ

ಕೊರೋನಾ ಸಂಕಷ್ಟದ ನಡುವೆಯೂ ಮಲೆ ಮಹದೇಶ್ವರನ ಹುಂಡಿಗೆ ಕೋಟಿಗಟ್ಟಲೆ ಹಣ ಹರಿದು ಬಂದಿದೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 54 ದಿನಗಳ ಬಳಿಕ ಹುಂಡಿ ಎಣಿಕೆಯಲ್ಲಿ ಒಟ್ಟು 2,21,32,439 ಕೋಟಿ ರೂಪಾಯಿ ಸಂಗ್ರಹವಾಗಿದೆ.

ನಗದು ಹಣದ ಜೊತೆಗೆ 40 ಗ್ರಾಂ ಚಿನ್ನ, 1 ಕೆಜಿ 657 ಗ್ರಾಂ ಬೆಳ್ಳಿಯನ್ನು ಭಕ್ತರು ಸಮರ್ಪಿಸಿದ್ದಾರೆ. ಈ ಬಾರಿ ಹನ್ನೊಂದೂವರೆ ಲಕ್ಷ ರೂಪಾಯಿಗೂ ಹೆಚ್ಚು ಹಣ ನಾಣ್ಯಗಳ ಮೂಲಕವೇ ಸಂಗ್ರಹವಾಗಿರುವುದು ವಿಶೇಷವಾಗಿದೆ. 

ಮಹದೇಶ್ವರ ಬೆಟ್ಟದಲ್ಲಿ  ಪ್ರತಿ  ತಿಂಗಳಿಗೊಮ್ಮೆ ಹುಂಡಿ ಏಣಿಕೆ ನಡೆಯುತ್ತಿತ್ತು. ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದರಿಂದ ಹುಂಡಿ ಏಣಿಕೆ ನಡೆದಿರಲಿಲ್ಲ.
ನಂತರ 82 ದಿನಗಳ ಬಳಿಕ ಅಂದರೆ ಸೆಪ್ಟೆಂಬರ್ 18 ರಂದು ಹುಂಡಿ  ಎಣಿಕೆ ನಡೆದು ಮಹದೇಶ್ವರನ ಆದಾಯದಲ್ಲಿ ಕುಸಿತ ಕಂಡು ಬಂದಿತ್ತು.

ಮೊದಲು ಪ್ರತಿ ತಿಂಗಳ ಸರಾಸರಿ 1.50 ಕೋಟಿ ರೂ ಸಂಗ್ರಹವಾಗುತ್ತಿತ್ತು. ಆದರೆ, 82 ದಿನಗಳಿಗೆ 1.47 ಕೋಟಿ ರೂ ಸಂಗ್ರಹವಾಗುವ ಮೂಲಕ ಕಾಣಿಕೆ ಮೊತ್ತ ಇಳಿಮುಖವಾಗಿತ್ತು. ಆದರೆ, ಇದೀಗ 54 ದಿನಗಳ ಅವಧಿಯಲ್ಲಿ 2,21,32,439 ಕೋಟಿ ರೂಪಾಯಿ ಸಂಗ್ರಹವಾಗಿದ್ದು ಮಹದೇಶ್ವರನ ಆದಾಯ ನಿಧಾನವಾಗಿ ಹೆಚ್ಚಾಗುವ ಲಕ್ಷಣಗಳು ಕಂಡುಬಂದಿವೆ.

ಜೂನ್ ನಂತರ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತಾದರೂ ದರ್ಶನ ಹೊರತುಪಡಿಸಿ ಯಾವುದೇ ರೀತಿಯ ಸೇವೆಗಳಿಗೆ ಅವಕಾಶ ಇರಲಿಲ್ಲ. ಆದರೆ ಕೆಲ ದಿನಗಳ ಹಿಂದೆ ಮುಡಿಸೇವೆ, ರಾತ್ರಿ ವಾಸ್ತವ್ಯ ಹಾಗು ವಿವಿಧ ಸೇವೆಗಳಿಗೆ ವಿಧಿಸಲಾಗಿದ್ದ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸಿದ್ದರಿಂದ ಇತ್ತೀಚೆಗೆ ಭಕ್ತರ ಸಂಖ್ಯೆಯು ಜಾಸ್ತಿಯಾಗಿದೆ.

ಈ ಮೊದಲು ಚಿನ್ನದ ರಥಧ ಮೇಲೆ ಭಕ್ತರು ನಾಣ್ಯಗಳನ್ನು ಎಸೆಯವುದು ರೂಢಿಯಲ್ಲಿತ್ತು. ಇದರಿಂದ ಚಿನ್ನದ ರಥಕ್ಕೆ ಹಾನಿಯಾಗುವುದನ್ನು ಮನಗಂಡು ನಾಣ್ಯಗಳನ್ನು ಎಸೆಯುವುದನ್ನು ನಿಷೇಧಿಸಲಾಗಿತ್ತು. ರಥದ ಮೇಲೆ ನಾಣ್ಯ ಎಸೆಯುವ ಬದಲು ಹುಂಡಿಗೆ ಹಾಕುವಂತೆ ಭಕ್ತರಲ್ಲಿ ಮನವಿ ಮಾಡಲಾಗಿತ್ತು. ಈ ಕಾರಣದಿಂದಲೇ ಈ ಬಾರಿ ಹುಂಡಿಯಲ್ಲಿ ಹನ್ನೊಂದುವರೆ ಲಕ್ಷ ರೂಪಾಯಿಗೂ ಹೆಚ್ಚು ಹಣ ನಾಣ್ಯಗಳ ಮೂಲಕವೇ ಸಂಗ್ರಹವಾಗಿದೆ ಎಂದು ಅವರು ತಿಳಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More

May 15, 2024

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024