ಇಂದು – ನಾಳೆಯೊಳಗೆ ಮದ್ದೂರು ಬೈಪಾಸ್ ಸಂಚಾರಕ್ಕೆ ಓಪನ್ – ಸಂಸದ ಪ್ರತಾಪ್ ಸಿಂಹ

Team Newsnap
1 Min Read
Maddur bypass open from today or tomorrow - MP Pratap Simha ಇಂದು - ನಾಳೆಯೊಳಗೆ ಮದ್ದೂರು ಬೈಪಾಸ್ ಸಂಚಾರಕ್ಕೆ ಓಪನ್ - ಸಂಸದ ಪ್ರತಾಪ್ ಸಿಂಹ

ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೈವೇಯ ಮದ್ದೂರು ಬೈಪಾಸ್ ರಸ್ತೆ ಇಂದು ಅಥವಾ ನಾಳೆಗೆ ಸಂಚಾರಕ್ಕೆ ಮುಕ್ತವಾಗಲಿದೆ.

ನವೆಂಬರ್ ಅಂತ್ಯದ ವೇಳೆ ಮದ್ದೂರು ಬೈಪಾಸ್ ಓಪನ್ ಆಗಲಿದೆ ಎಂದು ಈ ಹಿಂದೆ ಸಂಸದ ಪ್ರತಾಪ್ ಸಿಂಹ ಹೇಳಿದ್ದರು. ಆದರೆ ಐದಾರು ದಿನ ತಡವಾಗಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಜನರ ಕ್ಷಮೆ ಕೋರಿದ್ದಾರೆ.ಚಿತ್ರದುರ್ಗದ ಡಾ. ರೂಪಾ ಸಾವಿಗೆ ಟ್ವಿಸ್ಟ್‌: ತಲೆಗೆ ಗುಂಡೇಟು ಬಿದ್ದು ಸಾವು?

ಐದಾರು ದಿನ ಮಳೆಯಿಂದ ಬೈಪಾಸ್ ಕಾಮಗಾರಿ ತಡವಾಗಿದೆ. ಎಕ್ಸ್ ಪೆಂಕ್ಷನ್ ಜಾಯಿಂಟ್ ಕೆಲಸ ಮುಕ್ತಾಯವಾಗಿದೆ ಸೇಫ್ಟಿ ಆಡಿಟಿಂಗ್, ಲೋಡ್ ಟೆಸ್ಟಿಂಗ್, ಮಾರ್ಕಿಂಗ್ ಕೂಡ ಮುಗಿದಿದೆ. ಫ್ಲೈಓವರ್‌ ಸಂಚಾರಕ್ಕೆ ಮುಕ್ತವಾದರೆ ಮೈಸೂರು – ಬೆಂಗಳೂರು ಸಂಚರಿಸುವವರಿಗೆ ಕನಿಷ್ಠ 15-20 ನಿಮಿಷ ಉಳಿಯುತ್ತೆ ಎಂದು ಪ್ರತಾಪ್ ಸಿಂಹ ಫೇಸ್‍ಬುಕ್ ಲೈವ್ ನಲ್ಲಿ ಹೇಳಿದ್ದಾರೆ

ಕೆಲವೇ ದಿನಗಳಲ್ಲಿ ಶ್ರೀರಂಗಪಟ್ಟಣ ಬೈಪಾಸ್ ಕೂಡ ಓಪನ್ ಆಗಲಿದೆ ಹನಕರೆ, ಯಲಿಯೂರು, ಇಂಡವಾಳು ಸೇರಿದಂತೆ ಹಲವಡೆ ಅಂಡರ್ ಪಾಸ್ ಕಾಮಗಾರಿ ಆಗಬೇಕಿದೆ. ಮೈ-ಬೆಂ ದಶಪಥ ರಸ್ತೆ ಕಾಮಗಾರಿ ಪೂರ್ಣ ಆಗಲು ಇನ್ನು ಎರಡು ತಿಂಗಳು ಬೇಕಿದೆ ಎಂದು ಮದ್ದೂರು ಫ್ಲೈಓವರ್‌ ಮೇಲೆ ಸಂಚರಿಸಿ ಫೇಸ್‍ಬುಕ್ ಲೈವ್ ಮೂಲಕ ದಶಪಥ ಹೆದ್ದಾರಿ ಬಗ್ಗೆ ಪ್ರತಾಪ್ ಸಿಂಹ ಮಾಹಿತಿ ನೀಡಿದರು.

Share This Article
Leave a comment