Karnataka

ಮದ್ದೂರು : ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಎಂ ಉದಯ್ ನಾಮಪತ್ರ

ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಎಂ.ಉದಯ್ ಬುಧವಾರ ಬೃಹತ್ ರೋಡ್ ಶೋ ನಡೆಸಿ ನಂತರ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಉದಯ್ ನಾಮಪತ್ರ ಸಲ್ಲಿಸುವ ವೇಳೆ ಎಐಸಿಸಿ ಸದಸ್ಯ ಎನ್.ಚಲುವರಾಯಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ ಮಾಜಿ ಸದಸ್ಯ ಬಿ.ರಾಮಕೃಷ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಸಾಥ್ ನೀಡಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಪುರಾಣ ಪ್ರಸಿದ್ಧ ಶ್ರೀ ಉಗ್ರ ನರಸಿಂಹಸ್ವಾಮಿ ದೇವಾಲಯದಲ್ಲಿ ಪತ್ನಿ ವಿನುತಾ ಅವರೊಂದಿಗೆ ಪೂಜೆ ಸಲ್ಲಿಸಿದ ಉದಯ್ ಅವರು ತರುವಾಯು ತೆರೆದ ವಾಹನದಲ್ಲಿ ಜಾನಪದ ಕಲಾ ತಂಡಗಳ ಆಕರ್ಷಕ ಮೆರವಣಿಗೆಯೊಂದಿಗೆ ಪ್ರಮುಖ ಬೀದಿಗಳಲ್ಲಿ ಸಹಸ್ರಾರು ಬೆಂಬಲಿಗರ ಜೊತೆ ತಾಲ್ಲೂಕು ಕಛೇರಿಗೆ ತೆರಳಿ ಚುನಾವಣಾಧಿಕಾರಿ ಆರ್.ನಾಗರಾಜ್ ಅವರಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ರಾಜಕೀಯ ಪಕ್ಷಗಳ ರೀತಿ ಕ್ಷೇತ್ರದ ಜನರು ಯಾವುದೇ ಆಮಿಷಗಳಿಗೆ ಒಳಗಾಗದೆ ಶಕ್ತಿ ಪ್ರದರ್ಶನ ಮಾಡಿಲ್ಲ ನನ್ನ ಮೇಲೆ ಅಭಿಮಾನ ಮತ್ತು ವಿಶ್ವಾಸದ ಹುಮ್ಮಸ್ಸಿನಿಂದ ಬಂದು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಕೆ.ಎಂ.ಉದಯ್ ಹೇಳಿದರು.

ಮದ್ದೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಎಸ್.ಗುರುಚರಣ್ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ನಾನು ಖುದ್ದು ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಮಾಡಲಾಗುವುದು ಎಂದು ಎಐಸಿಸಿ ಸದಸ್ಯ ಎನ್.ಚಲುವರಾಯಸ್ವಾಮಿ ಹೇಳಿದರು. ಬಳ್ಳಾರಿಯ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲು- ಮಾಜಿ ಶಾಸಕ ಅನಿಲ್ ಲಾಡ್ ಗೆ ಟಿಕೆಟ್!

ಎಸ್.ಗುರುಚರಣ್‌ ಅವರಿಗೆ ಟಿಕೆಟ್ ಕೈ ತಪ್ಪಿರುವುದು ಅವರಿಗೆ ಮಾತ್ರವಲ್ಲ ನಮಗೂ ಬೇಸರವಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮದೇಗೌಡ, ದಿನೇಶ್ ಗೂಳಿಗೌಡ, ಮಾಜಿ ಸದಸ್ಯ ಬಿ.ರಾಮಕೃಷ್ಣ ಹಾಗೂ ಅಭ್ಯರ್ಥಿ ಉದಯ್ ಮತ್ತು ಗುರುಚರಣ್ ಒಗ್ಗಟ್ಟಿನಿಂದ ಮದ್ದೂರು ಕ್ಷೇತ್ರದ ಅಭ್ಯರ್ಥಿ ಗೆಲುವಿಗೆ ಸಾಕ್ಷಿಯಾಗಬೇಕೆಂದು ಚೆಲುವರಾಯಸ್ವಾಮಿ ಹೇಳಿದರು.

ಮತ್ತೊಮ್ಮೆ ಗುರುಚರಣ್ ಅವರೊಂದಿಗೆ ಮಾತುಕತೆ ನಡೆಸಿ ಕಾಂಗ್ರೆಸ್ ಪಕ್ಷದಲ್ಲೆ ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಚಲುವರಾಯಸ್ವಾಮಿ ತಿಳಿಸಿದರು.

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024