ಅಪ್ಪುಗೌಡನ ಕೊಲೆಗೆ ಸ್ನೇಹಿತನಿಂದಲೇ ಸುಫಾರಿ ಕೊಡಲಾಗಿದೆ ಎಂಬ ಸತ್ಯಾಂಶವನ್ನು ಬಂಧನಕ್ಕೆ ಒಳಗಾದ ಆರೋಪಿಗಳು ಬಾಯಿಬಿಟ್ಟಿದ್ದಾರೆ.
ಈ ಹತ್ಯೆಯ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ದೂರು ಪೋಲೀಸರು ಕೋಣಸಾಲೆ ಮಧು ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸುಪಾರಿ ನೀಡಿದ ವ್ಯಕ್ತಿಯನ್ನು ಬೆಸಗರಹಳ್ಳಿ ಸಮೀಪದ ಕೋಣಸಾಲೆ ಗ್ರಾಮದ ಮಧು ಎನ್ನಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಕುಖ್ಯಾತ ರೌಡಿಯೊಬ್ಬನಿಗೆ ಅಪ್ಪುಗೌಡನ ಕೊಲೆಗೆ ಮಧು ಸುಫಾರಿ ನೀಡಿದ್ದನು ಎನ್ನಲಾಗಿದೆ.
ಕಳೆದ ಆರು ತಿಂಗಳಿಂದ ಈ ವೈಷಮ್ಯ ಆರಂಭವಾಗಿ ಈಗ ಸುಪಾರಿ ಕೊಟ್ಟು ಕೊಲೆ ಮಾಡಲು ತಿಳಿಸಿದ್ದಾನೆ ಎಂದು ತಿಳಿದು ಬಂದಿದೆ. ಕೊಲೆಗೆ ಸುಪಾರಿ ಕೊಟ್ಟಿದ್ದ ಮಧುಗೌಡ ಹಾಗೂ ಮಾರಣಾಂತಿಕ ಹಲ್ಲೆಗೆ ಒಳಗಾಗಿರುವ ಅಪ್ಪುಗೌಡ ಇಬ್ಬರೂ ಆತ್ಮೀಯ ಸ್ನೇಹಿತರಾಗಿದ್ದರು.
ಕೆಲ ರಿಯಲ್ ಎಸ್ಟೇಟ್ ಉದ್ಯಮ ವ್ಯವಹಾರಗಳಲ್ಲಿ ಪಾಲುದಾರರೂ ಆಗಿದ್ದರು. ಆದರೆ ಇತ್ತೀಚೆಗೆ ವ್ಯವಹಾರದಲ್ಲಿ ಗೊಂದಲ ಉಂಟಾಗಿ ಮನಸ್ತಾಪವಾಗಿದ್ದ ಹಿನ್ನೆಲೆಯಲ್ಲಿ ಇಬ್ಬರೂ ಸ್ನೇಹಿತರು ಪರಸ್ಪರ ದೂರವಾಗಿದ್ದರು. ಅಲ್ಲದೇ ಅಪ್ಪುಗೌಡ ಮಧು ವಿರುದ್ದ ಚೆಕ್ ಬೌನ್ಸ್ ಕೇಸ್ ಕೂಡ ಹೂಡಿದ್ದರು. ಇದರಿಂದ ಅವಮಾನ ತಾಳಲಾರದೇ ಮಧುಗೌಡ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದ ಜಗದೀಶ್ ಎಂಬ ರೌಡಿಗೆ ಅಪ್ಪುಗೌಡನ ಕೊಲೆಗೆ ಸುಪಾರಿ ನೀಡಿದ್ದಾನೆ.ಗೂಂಡಾ ಕಾಯ್ದೆ ಅಡಿ ಕೆರೆಹಳ್ಳಿ ಪುನೀತ್ ಬಂಧನ
ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಕುಳಿತು ಅಪ್ಪುಗೌಡನ ಕೊಲೆಗೆ ಜಗದೀಶ್ ಸ್ಕೆಚ್ ಹಾಕಿದ್ದಾನೆ. ಇಂದು ಜಗದೀಶ್ ಸಹಚರರಿಂದ ಅಪ್ಪುಗೌಡ ಮೇಲೆ ಮಾರಾಕಾಸ್ತ್ರಗಳಿಂದ ಅಟ್ಯಾಕ್ ಮಾಡಿದ್ದರು. ಆದರೆ ಅದೃಷ್ಟವಶ ಅಪ್ಪುಗೌಡ ಬದುಕುಳಿದಿದ್ದಾರೆ.
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
This website uses cookies.
Leave a Comment