ಮಡಿಕೇರಿ – ಕಾವೇರಿ ತೀರ್ಥೋದ್ಭವ ವೀಕ್ಷಣೆಗೆ ಎಲ್ಲ ಭಕ್ತರಿಗೆ ಅವಕಾಶ – ಸಚಿವ ಪೂಜಾರಿ

Team Newsnap
0 Min Read

ಅ 17 ರಂದು ಪವಿತ್ರ ಕಾವೇರಿ ತೀರ್ಥೋದ್ಭವ ವೀಕ್ಷಣೆಗೆ ತಲಕಾವೇರಿ ಕ್ಷೇತ್ರಕ್ಕೆ ಎಲ್ಲ ಭಕ್ತರಿಗೆ ಮುಕ್ತ ಅವಕಾಶ ಕಲ್ಪಿಸಲಾಗುವುದೆಂದು ಕೊಡಗು ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಕಳೆದ ಶನಿವಾರ ತೀರ್ಥೋದ್ಭವಕ್ಕೆ ತಲಕಾವೇರಿಗೆ ಬರುವ ಭಕ್ತರು ಭಗಮಂಡಲದಿಂದ ಕಾಲ್ನನಡಿಗೆಯಲ್ಲಿ ಬರಬೇಕು. ವಾಹನಗಳನ್ನು ಭಾಗಮಂಡಲದಲ್ಲಿ ನಿಲ್ಲಿಸಬೇಕು, ಕೋವಿಡ್ ವರದಿ ಮತ್ತು ವ್ಯಾಕ್ಸಿನೇಷನ್‌ ಕಡ್ಡಾಯ ಮಾಡಲಾಗಿತ್ತು.

ಈ ನಿಯಮದ ವಿರುದ್ಧ ಕೊಡಗಿನ ಮೂಲ ನಿವಾಸಿಗಳು ತಿರುಗಿ ಬಿದ್ದಿದ್ದರು. ಮುಖ್ಯಮಂತ್ರಿ ಬೊಮ್ಮಾಯಿ ಅವರ ಗಮನಕ್ಕೆ ತಂದ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಗೊಂಡಿದ್ದು ಕೊಡಗಿನ ನಿವಾಸಿಗಳ ಜೊತೆ ಪ್ರವಾಸಿಗರಿಗೆ ಅವಕಾಶ ಮಾಡಿಕೊಡಲಾಗಿದೆ.

Share This Article
Leave a comment