February 21, 2026

Newsnap Kannada

The World at your finger tips!

shinde

ಕರ್ನಾಟಕಕ್ಕೆ ತಕ್ಕ ಪಾಠ ಕಲಿಸುತ್ತೇವೆ- ಉರಿಯುವ ಬೆಂಕಿಗೆ ತುಪ್ಪ ಸುರಿದ ಮಹಾರಾಷ್ಟ್ರ ಸಚಿವ

Spread the love

ಬೆಳಗಾವಿಯಲ್ಲಿ ಎಂಇಎಸ್, ಶಿವಸೇನೆ ಪುಂಡಾಟ ನಡೆಯುತ್ತಿರುವಗಲೇ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿರುವ ಕೆಲಸವನ್ನು ಮಹಾರಾಷ್ಟ್ರ ರಾಜಕಾರಣಿಗಳು ಮಾಡುತ್ತಿದ್ದಾರೆ . ಶಾಂತಿ ಕಾಪಾಡೋ ಬದಲಿಗೆ ಪ್ರಚೋದನಾತ್ಮಕ ಹೇಳಿಕೆಗಳು ನೀಡುತ್ತಿದ್ದಾರೆ.

ಸಿಎಂ ಬೊಮ್ಮಾಯಿ ಹೇಳಿಕೆ ಖಂಡಿಸಿ ಮಾತನಾಡಿದ ಮಹಾರಾಷ್ಟ್ರ ಆರೋಗ್ಯ ಸಚಿವ ಏಕನಾಥ್ ಶಿಂಧೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನಿನ್ನೆ ಎಂಇಎಸ್ ಪುಂಡಾಟದ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿಕೆ ನೀಡಿ. ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದರು.

ಬಸವರಾಜ್ ಬೊಮ್ಮಾಯಿ ಹೇಳಿಕೆ ಖಂಡಿಸಿದ ಏಕನಾಥ ಶಿಂಧೆ, ಕರ್ನಾಟಕಕ್ಕೆ ಶಿವ ಸೈನಿಕರು ತಕ್ಕ ಪಾಠ ಕಲಿಸಲು ಸಿದ್ಧರಿದ್ದಾರೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.
ಕಾನೂನು ಕೈಗೆತ್ತಿಕೊಂಡರೆ ಅದಕ್ಕೆ ಕರ್ನಾಟಕ ಸರ್ಕಾರವೇ ಹೊಣೆ. ಒಂದು ವೇಳೆ ಹಾಗೇನಾದರೂ ಮಾಡಿದ್ರು ಕರ್ನಾಟಕ ಸರ್ಕಾರವೇ ಇರೋಲ್ಲ ಎಂದಿದ್ದಾರೆ ಶಿಂಧೆ.

error: Content is protected !!