ಮಳವಳ್ಳಿಯಲ್ಲಿ 10 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸರ್ಕಾರ ಮೃತ ಬಾಲಕಿ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರು ಚೆಕ್ ಬಿಡುಗಡೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಖಾತೆಗೆ ಸಿಎಂ ಪರಿಹಾರ ನಿಧಿಯನ್ನು ವರ್ಗಾಯಿಸಲಾಗಿದೆ.ಸಿದ್ದು ಸೋಲಿಸಲು ವರುಣಾದಲ್ಲಿ ಬಿಜೆಪಿಯಿಂದ ವಿಜಯೇಂದ್ರನನ್ನು ಕಣಕ್ಕಿಳಿಸುವ ರಣ ತಂತ್ರ
ಸಚಿವ ಕೆ.ಗೋಪಾಲಯ್ಯ, ಸಂಸದೆ ಸುಮಲತಾ ಬುಧವಾರ ಮೃತ ಬಾಲಕಿ ನಿವಾಸಕ್ಕೆ ಭೇಟಿ ನೀಡಿದ್ದರು. ಕುಟುಂಬಕ್ಕೆ ಸಾಂತ್ವನ ಹೇಳಿದ ಕೆ.ಗೋಪಾಲಯ್ಯ, ಸಂಸದೆ ಸುಮಲತಾ ಅವರು, ಸಿಎಂ ಪರಿಹಾರದಿಂದ ನೀಡಲಾಗಿದ್ದ 10 ಲಕ್ಷ ರೂಪಾಯಿ ಚೆಕ್ಅನ್ನು ಹಸ್ತಾಂತರ ಮಾಡಿದರು.
ಕುಂಭಮೇಳದಲ್ಲಿ ಮೃತ ಬಾಲಕಿ ಕುಟುಂಬಕ್ಕೆ ಸಿಎಂ 10 ಲಕ್ಷ ಪರಿಹಾರ ಘೋಷಿಸಿದ್ದರು.ಈ ವೇಳೆ ಶಾಸಕ ಅನ್ನದಾನಿ, ಜಿಲ್ಲಾಧಿಕಾರಿ ಅಶ್ವಥಿ ಸೇರಿದಂತೆ ಕೂಡ ಸ್ಥಳದಲ್ಲಿ ಹಾಜರಿದ್ದರು.
ಶಿಕ್ಷಣ ಇಲಾಖೆ ಹೈ ಅಲರ್ಟ್:
ಟ್ಯೂಷನ್ ಹೋಗಿದ್ದ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಂತರ ಇದೀಗ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆ ಫುಲ್ ಅಲರ್ಟ್ ಆಗಿದೆ. ಅತ್ಯಾಚಾರ ಘಟನೆಯಿಂದ ಪೋಷಕರ ವಲಯದಲ್ಲಿ ಸದ್ಯ ಆತಂಕ ಮನೆ ಮಾಡಿದೆ. ಹೀಗಾಗಿ ಶಿಕ್ಷಣ ಇಲಾಖೆ ಅಲರ್ಟ್ ಆಗಿದ್ದು, ಅನುಮತಿ ಪಡೆಯದೆ ಟ್ಯೂಷನ್ ಸೆಂಟರ್ಗಳನ್ನು ನಡೆಸಿದ್ರೆ ಎಫ್ಐಆರ್ ದಾಖಲು ಮಾಡಲಾಗುತ್ತದೆ. ಅಲ್ಲದೇ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಿಕ್ಷಕರು ಟ್ಯೂಷನ್ ಮಾಡಿದರೆ ಶಿಸ್ತುಕ್ರಮ ತೆಗೆದುಕೊಳ್ಳುವುದಾಗಿಯೂ ಸಹ ಆದೇಶ ಹೊರಡಿಸಲಾಗಿದೆ.
- ಹಾಡ್ಲಿ ಮೇಗಳಪುರ ವೃತ್ತದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
- ಪದ್ಮಭೂಷಣ ಗಾಯಕಿ ವಾಣಿ ಜಯರಾಂ ಇನ್ನಿಲ್ಲ
- ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
- ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
- ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು
More Stories
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು