ತಾಲೂಕಿನಲ್ಲಿ ಬಲವಂತದ ಮತಾಂತರವಾಗಿಲ್ಲ ಎಂದು ವರದಿ ನೀಡಿರುವ ಹೊಸದುರ್ಗ ತಹಶೀಲ್ದಾರ್ ತಿಪ್ಪೇಸ್ವಾಮಿಯನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ.
ತಹಶೀಲ್ದಾರ್ಗೆ ಸ್ಥಳ ನಿಯೋಜನೆ ಮಾಡದೇ ತಿಪ್ಪೇಸ್ವಾಮಿ ಅವರನ್ನು ಎತ್ತಂಗಡಿ ಮಾಡಿಸಿದ್ದಾರೆ. ಹೊಸದುರ್ಗಕ್ಕೆ ನೂತನ ತಹಶೀಲ್ದಾರ್ ಆಗಿ ಮಲ್ಲಿಕಾರ್ಜುನ್ ಅವರನ್ನು ನಿಯೋಜಿಸಲಾಗಿದೆ.
ಕಳೆದ ವಿಧಾನಸಭೆ ಅಧಿವೇಶನದಲ್ಲಿ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ , ಸ್ವತಃ ಅವರ ತಾಯಿ ಸೇರಿದಂತೆ ಸುಮಾರು 140 ಕ್ಕೂ ಅಧಿಕ ಹಿಂದೂಗಳು, ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದಾರೆ. ಅವರಿಗೆ ಇಲ್ಲಸಲ್ಲದ ಆಮಿಷವೊಡ್ಡಿ, ಒತ್ತಾಯಪೂರ್ವಕವಾಗಿ ಕ್ರೈಸ್ತಮಿಷಿನರಿಗಳು ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ಸರ್ಕಾರದ ಆದೇಶದಂತೆ ಸ್ಥಳ ಪರಿಶೀಲನೆ ನಡೆಸಿದ್ದ ಹೊಸದುರ್ಗದ ತಹಶೀಲ್ದಾರ್ ತಿಪ್ಪೇಸ್ವಾಮಿ , ನವೆಂಬರ್ 30 ರಂದು ಚಿತ್ರದುರ್ಗ ಜಿಲ್ಲಾಧಿಕಾರಿ ಮೂಲಕ ಪರಿಶೀಲನೆ ನಡೆಸಿದ್ದು, ತಾಲೂಕಿನಾದ್ಯಂತ ಬಲವಂತದ ಮತಾಂತರವಾಗಿಲ್ಲ. ಅವರೆಲ್ಲರೂ ಸ್ವಇಚ್ಛೆಯಿಂದ ಪೂಜಾ ಕೈಂಕರ್ಯ ಹಾಗೂ ಪ್ರಾರ್ಥನೆ ಸಲ್ಲಿಸುತಿದ್ದಾರೆಂದು ಸರ್ಕಾರಕ್ಕೆ ವರದಿ ನೀಡಿದ್ದರು.
ಈ ವರದಿಯಿಂದ ಆಕ್ರೋಶಗೊಂಡ ಶಾಸಕ ಗೂಳಿಹಟ್ಟಿ ಶೇಖರ್ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿ ತಹಶೀಲ್ದಾರ್ ಎತ್ತಂಗಡಿ ಮಾಡುವ ಮೂಲಕ ಬಿಗ್ ಶಾಕ್ ನೀಡಿದ್ದಾರೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment