ಏಕಾಂಗಿಯಾಗಿ ಬಾವಿ ತೋಡಿ : ನೀರು ತಂದ ಪದವೀಧರ ಭಗೀರಥ

Team Newsnap
1 Min Read

ಕೃಷಿಗಾಗಿ ಸತತ 5 ತಿಂಗಳಿನಿಂದ ಏಕಾಂಗಿಯಾಗಿ ಬಾವಿ ತೋಡಿದ ಎಂಟೆಕ್ ಪದವೀಧರರೊಬ್ಬರು ನೀರು ತಂದು ಆಧುನಿಕ ಭಗೀರಥ ಎನಿಸಿಕೊಂಡಿದ್ದಾರೆ.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸೂರ್ಯಕಾಂತ್ ಪ್ರಭು ಎಂಟೆಕ್ ಓದಿದ್ದಾರೆ. 25/30 ವಿಸ್ತೀರ್ಣದ 14 ಅಡಿ ಬಾವಿಯನ್ನು ಬಬ್ಬರೇ ತೋಡಿ ನೀರು ತೆಗೆದಿದ್ದಾರೆ.

ಎಂಟೆಕ್ ಮಾಡಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸೂರ್ಯಕಾಂತ್ ಲಾಕ್‍ಡೌನ್ ವೇಳೆ ಕೃಷಿಯಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಛಲದಿಂದ ಈ ಸಾಧನೆ ಮಾಡಿದ್ದಾರೆ.

ಮೊದ ಮೊದಲು ಈ ಪದವೀಧರನ ಸಾಹಸ ನೋಡಿ ಗ್ರಾಮಸ್ಥರು ಹುಚ್ಚು ಎನ್ನುತ್ತಿದ್ದರು. ಈಗ ಅದೇ ಗ್ರಾಮಸ್ಥರು ಅವರ ಬಾವಿಯಿಂದ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ.

ಬಾವಿ ನೀರಿನಿಂದ 400 ಗಡಿಗಳನ್ನು ಬೆಳಸಿರುವ ಸೂರ್ಯಕಾಂತ್ ಛಲಕ್ಕೆ ಜಿಲ್ಲೆಯ ಜನರು ಜೈ ಅನ್ನುತ್ತಿದ್ದಾರೆ.

Share This Article
Leave a comment