ಗ್ರಾಮೀಣ ಜನರ ಕುಂದು ಕೊರತೆಗಳನ್ನು ಆಲಿಸಿ ಸಮಸ್ಯೆಗಳನ್ನು ಪರಿಹರಿಸುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ನಾಗಮಂಗಲ ತಾಲ್ಲೂಕಿನ ಕಾಳಿಂಗನಹಳ್ಳಿಯಲ್ಲಿ ಜೂನ್ 22 ಹಾಗೂ 23 ರಂದು ನಡೆಯಿತು
ಇದನ್ನು ಓದಿ –ಅಡುಗೆ ಎಣ್ಣೆ ಲೀಟರ್ಗೆ : 10 ರೂಪಾಯಿಂದ 20 ರೂಪಾಯಿವರೆಗೆ ಇಳಿಕೆ ?
ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಬುಧವಾರ ಎತ್ತಿನ ಗಾಡಿಯಲ್ಲಿ ಆಗಮಿಸಿದಾಗ ಮಹಿಳೆಯರು ಕಳಸವನ್ನು ಹೊತ್ತಿ ಸ್ವಾಗತಿಸಿದರು.ಜಿಲ್ಲಾಧಿಕಾರಿಗಳು ಗ್ರಾಮ ದೇವತೆಗೆ ಪೂಜೆ ಸಲ್ಲಿಸಿದ ನಂತರ ಗ್ರಾಮಸ್ಥರೊಂದಿಗೆ ಕುಳಿತು ಗ್ರಾಮದ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಗ್ರಾಮಸ್ಥರು ಸರ್ಕಾರಿ ಶಾಲೆ, ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿಗೆ ಕಾಂಪೌಂಡ್ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರು. ಚರಂಡಿ ಸ್ವಚ್ಛತೆ ಹಾಗೂ ಕೆರೆಯ ಸ್ವಚ್ಛತೆ ಕುರಿತಂತೆ ಸಾರ್ವಜನಿಕರು ಅರ್ಜಿ ಸಲ್ಲಿಸಿದಾಗ ಜನಸಾಮಾನ್ಯರು ಕೂಡ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಬೇಕು ಎಂದರು.
ಅಹವಾಲುಗಳನ್ನು ಆಲಿಸಿದ ನಂತರ ಮಕ್ಕಳು ನಡೆಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದರು. ಜೂನ್ 23 ರಂದು ಬೆಳಿಗ್ಗೆ ಮಕ್ಕಳೊಂದಿಗೆ ಯೋಗಾಭ್ಯಾಸ ನಡೆಸಿದರು.
ನಂತರ ಸ್ವಚ್ಛತಾ ಆಂದೋಲನದಲ್ಲಿ ಭಾಗವಹಿಸಿ ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಮಾಡಲು ಸಹಕರಿಸಬೇಕೆಂದು ಮನೆ ಮನೆಗೆ ತೆರಳಿ ಬಟ್ಟೆ ಬ್ಯಾಗ್ ಗಳನ್ನು ವಿತರಿಸಿ ಅರಿವು ಮೂಡಿಸಿದರು..
ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ನಾಗಮಂಗಲ ತಹಶೀಲ್ದಾರ್ ನಂದೀಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!