ಕುಶಾಲನಗರ ತಾಲ್ಲೂಕಿನ ಆನೆಕಾಡು ಗ್ರಾಮದ ಬಳಿ, ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದಕಾರಿನಲ್ಲಿ ವೈದ್ಯ ಸತೀಶ್ ಚುಚ್ಚು ಮದ್ದಿನ ಮೂಲಕ ಆತ್ಮ ಹತ್ಯೆಮಾಡಿಕೊಂಡಿರುವ ಶಂಕೆ ಇದೆ .
ಡಾ ಸತೀಶ್(47) ಮಂಡ್ಯ ಜಿಲ್ಲೆ ಶಿವಳ್ಳಿ ಗ್ರಾಮದ ನಿವಾಸಿ. ಅಲ್ಲದೇ ಅದೇ ಗ್ರಾಮದಲ್ಲಿ ಖಾಸಗಿ ಕ್ಲೀನಿಕ್ ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು . ಇತ್ತೀಚಿಗೆ ಬೆಳಕಿಗೆ ಬಂದ 900 ಭ್ರೂಣ ಹತ್ಯೆ ಪ್ರಕರಣದಲ್ಲಿ ಅವರ ಹೆಸರು ಸಹ ಕೇಳಿಬಂದಿತ್ತು.
ಇನ್ನು ಬಂಧಿತ ಆರೋಪಿಗಳು ವಿಚಾರಣೆ ವೇಳೆ ಸತೀಶ್ ಅವರ ಹೆಸರು ಹೇಳಿದ್ದರು ಎನ್ನಲಾಗಿದೆ. ಅಲ್ಲದೆ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವೈದ್ಯ ಸತೀಶ್ ಅವರು ತಲೆಮರೆಸಿಕೊಂಡಿದ್ದರು.
ರಾಜ್ಯ ಸರ್ಕಾರ ಈಗ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ಹೀಗಾಗಿ ತಾನು ಕೂಡ ಸಿಕ್ಕಿಬಿಳುವ ಭಯದಿಂದ ವೈದ್ಯ ಸತೀಶ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.ತಾತ್ಕಾಲಿಕ SSLC, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
ವೈದ್ಯನ ಸಾವು ಹಲವು ಅನುಮಾನಕ್ಕೆ ಕಾರಣವಾಗಿದ್ದು, ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು