ಘಟನೆ ಜನವರಿ 31ರಂದು ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಪ್ಪಿತಸ್ಥರು ಬಾಲಕಿಗೆ ಮೊದಲು ಕೇಕ್ ನೀಡಿದ್ದು, ನಂತರ ಚಾಕು ತೋರಿಸಿ ಬೆದರಿಸಿ, ಸರ್ಕಾರಿ ಶಾಲಾ ಆವರಣದಲ್ಲೇ ಅತ್ಯಾಚಾರವೆಸಗಿದ್ದಾರೆ.
ಈ ದಾರುಣ ಘಟನೆ ಬಾಲಕಿಗೆ ಋತುಮತಿ ಆದ ಬಳಿಕವೂ ಹೊಟ್ಟೆ ನೋವು ಮತ್ತು ನಿರಂತರ ರಕ್ತಸ್ರಾವದಿಂದಾಗಿ ಬೆಳಕಿಗೆ ಬಂದಿದೆ. ಕುಟುಂಬ ಸದಸ್ಯರು ವಿಚಾರಿಸಿದಾಗ, ಬಾಲಕಿ ತನ್ನ ಚಿಕ್ಕಮ್ಮನ ಬಳಿ ಈ ಅಮಾನುಷ ಕೃತ್ಯದ ಬಗ್ಗೆ ವಿವರಿಸಿದ್ದಾಳೆ.
ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಕ್ಕೆ ಭೇಟಿ ನೀಡಿದ ಪೊಲೀಸರು ಬಾಲಕಿಯ ಆರೋಗ್ಯ ಸ್ಥಿತಿ ವಿಚಾರಿಸಿ, ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.ಇದನ್ನು ಓದಿ -ಕೆರೆಗೆ ಈಜಲು ತೆರಳಿದ ಇಬ್ಬರು ಬಾಲಕರು ನೀರುಪಾಲು
ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತಪ್ಪಿತಸ್ಥರ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
More Stories
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ