ಮಂಡ್ಯದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮಾಡಲು ಸಂಸದೆ ಸುಮಲತಾ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜುಜು ಅವರನ್ನು ಭೇಟಿ ಮಾಡಿ ಅನುದಾನ ಕೋರಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ‘ಮಂಡ್ಯದಲ್ಲಿ ಸುಸಜ್ಜಿತವಾದ ಒಳಾಂಗಣ ಕ್ರೀಡಾಂಗಣ ಸ್ಥಾಪಿಸುವುದು ಅಂಬರೀಶ್ ಕನಸಾಗಿತ್ತು. ಹಾಗಾಗಿ ಇಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜುಜು ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಅನುದಾನ ಬಿಡುಗಡೆ ಮಾಡುವಂತೆ ಕೋರಿದೆ’ ಎಂದು ಸುಮಲತಾ ಟ್ವಿಟರ್ ನಲ್ಲಿ ಬರೆದು ಕೊಂಡಿದ್ದಾರೆ.