ಮಂಡ್ಯ ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಮಂಗಳವಾರ ಯಶಸ್ವಿ ಯಾಗಿದೆ.
ಮಂಡ್ಯದಲ್ಲಿ ಲಾಕ್ ಡೌನ್ ನಿಂದಾಗಿ ಎಲ್ಲಾ ಪ್ರಮುಖ ರಸ್ತೆ ಗಳು, ಬೀದಿಗಳು ಬಿಕೋ ಎನ್ನುತ್ತಿವೆ. ಮೆಡಿಕಲ್ ಸ್ಟೋರ್ ಮತ್ತು ಆಸ್ಪತ್ರೆ ಗಳನ್ನು ಹೊರತುಪಡಿಸಿ ಎಲ್ಲವೂ ಬಂದ್ ಆಗಿವೆ.

ರಸ್ತೆಗಳಲ್ಲಿ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಎಲ್ಲಾ ಕಡೆ ಪೋಲಿಸ್ ಸರ್ಪಗಾವಲು ಹಾಕಲಾಗಿದೆ.
ಜಿಲ್ಲೆ ವ್ಯಾಪ್ತಿಯಲ್ಲಿ ಬ್ಯಾಂಕ್ ಸೇವೆಗಳಿಗೂ ನಿರ್ಬಂಧ ಹೇರಲಾಗಿದೆ. ಮೇ 25, 26, 28, 29 ರಂದು ನಾಲ್ಕು ದಿನಗಳು ಪೂರ್ತಿ ಬ್ಯಾಂಕ್ ವ್ಯವಹಾರ ನಿರ್ಬಂಧಿಸಿ ಡಿಸಿ ಅಶ್ವತಿ ಆದೇಶ ಹೊರಡಿಸಿದ್ದಾರೆ.
ವೈದ್ಯಕೀಯ ಸೇವೆ, ಹಾಲಿನ ಬೂತ್, ನ್ಯಾಯ ಬೆಲೆ ಅಂಗಡಿ ಹಾಗೂ ಕೃಷಿ ಚಟುವಟಿಕೆಗಳಿಗೆ ಪೂರಕ ಅಂಗಡಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಉಳಿದಂತೆ ಎಲ್ಲವೂ ಸ್ತಬ್ಧ. ದಿನಸಿ, ತರಕಾರಿ ಖರೀದಿಗೂ ಅವಕಾಶ ಇಲ್ಲ. ಹೊಟೆಲ್ ಗಳು, ಮದ್ಯದಂಗಡಿ ಗಳನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ.
ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿದೆ. ಅಲ್ಲದೆ ಅನಗತ್ಯವಾಗಿ ವಾಹನಗಳಲ್ಲಿ ಓಡಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆಯನ್ನು ಡಿಸಿ ನೀಡಿದ್ದಾರೆ.


- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ