ಮಂಡ್ಯ ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಮಂಗಳವಾರ ಯಶಸ್ವಿ ಯಾಗಿದೆ.
ಮಂಡ್ಯದಲ್ಲಿ ಲಾಕ್ ಡೌನ್ ನಿಂದಾಗಿ ಎಲ್ಲಾ ಪ್ರಮುಖ ರಸ್ತೆ ಗಳು, ಬೀದಿಗಳು ಬಿಕೋ ಎನ್ನುತ್ತಿವೆ. ಮೆಡಿಕಲ್ ಸ್ಟೋರ್ ಮತ್ತು ಆಸ್ಪತ್ರೆ ಗಳನ್ನು ಹೊರತುಪಡಿಸಿ ಎಲ್ಲವೂ ಬಂದ್ ಆಗಿವೆ.
ರಸ್ತೆಗಳಲ್ಲಿ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಎಲ್ಲಾ ಕಡೆ ಪೋಲಿಸ್ ಸರ್ಪಗಾವಲು ಹಾಕಲಾಗಿದೆ.
ಜಿಲ್ಲೆ ವ್ಯಾಪ್ತಿಯಲ್ಲಿ ಬ್ಯಾಂಕ್ ಸೇವೆಗಳಿಗೂ ನಿರ್ಬಂಧ ಹೇರಲಾಗಿದೆ. ಮೇ 25, 26, 28, 29 ರಂದು ನಾಲ್ಕು ದಿನಗಳು ಪೂರ್ತಿ ಬ್ಯಾಂಕ್ ವ್ಯವಹಾರ ನಿರ್ಬಂಧಿಸಿ ಡಿಸಿ ಅಶ್ವತಿ ಆದೇಶ ಹೊರಡಿಸಿದ್ದಾರೆ.
ವೈದ್ಯಕೀಯ ಸೇವೆ, ಹಾಲಿನ ಬೂತ್, ನ್ಯಾಯ ಬೆಲೆ ಅಂಗಡಿ ಹಾಗೂ ಕೃಷಿ ಚಟುವಟಿಕೆಗಳಿಗೆ ಪೂರಕ ಅಂಗಡಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಉಳಿದಂತೆ ಎಲ್ಲವೂ ಸ್ತಬ್ಧ. ದಿನಸಿ, ತರಕಾರಿ ಖರೀದಿಗೂ ಅವಕಾಶ ಇಲ್ಲ. ಹೊಟೆಲ್ ಗಳು, ಮದ್ಯದಂಗಡಿ ಗಳನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ.
ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿದೆ. ಅಲ್ಲದೆ ಅನಗತ್ಯವಾಗಿ ವಾಹನಗಳಲ್ಲಿ ಓಡಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆಯನ್ನು ಡಿಸಿ ನೀಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ