ಮಂಡ್ಯದ ಉನ್ನತೀಕರಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜು ಉದ್ಘಾಟನೆ ವೇಳೆ ಶಾಸಕ ಎಂ. ಶ್ರೀನಿವಾಸ್ ಕೇಂದ್ರದ ಪ್ರಾಂಶುಪಾಲ ನಾಗಾನಂದ್ ಮೇಲೆ ಹಲ್ಲೆ ಮಾಡಿದ್ದಾರೆ
ಐಟಿಐ ಕೇಂದ್ರಕ್ಕೆ ಆಗಮಿಸಿದ ಶಾಸಕ ಕೇಂದ್ರವನ್ನು ಉದ್ಘಾಟಿಸಿದರು. ನಂತರ ನಗರಸಭಾಧ್ಯಕ್ಷ ಎಚ್.ಎಸ್. ಮಂಜು ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದರು.
ಶಾಸಕ ಮತ್ತು ನಗರಸಭಾಧ್ಯಕ್ಷ ಪ್ರಯೋಗಾಲಯದ ಒಳಗೆ ತೆರಳಿದದರು, ಆದರೆ ಕಿರಿದಾದ ಜಾಗವಾಗಿದ್ದರಿಂದ ಪ್ರಾಂಶುಪಾಲರು ಮುಂದೆ ಬರಲು ಸಾಧ್ಯವಾಗಲಿಲ್ಲ. ಈ ವೇಳೆ ಕಂಪ್ಯೂಟರ್ ಕೊಠಡಿ ವೀಕ್ಷಣೆ ವೇಳೆ ಮಾಹಿತಿಗಾಗಿ ಪ್ರಾಂಶುಪಾಲರನ್ನು ಹುಡುಕಾಡಿದ್ದಾರೆ. ಇದನ್ನು ಓದಿ – ಉತ್ತಮ ಆರೋಗ್ಯ ಸದಾ ನಗುಮುಖ ಯೋಗದಿಂದ ಮಾತ್ರ ಸಾಧ್ಯ: ನಾರಾಯಣ ಗೌಡ
ತಡವಾಗಿ ಮುಂದೆ ಬಂದಿದ್ದರಿಂದ ಕುಪಿತಗೊಂಡ ಶ್ರೀನಿವಾಸ್ಪ್ರಾಂಶುಪಾಲ ನಾಗಾನಂದ್ ಮುಂದೆ ಬರುತ್ತಿದ್ದಂತೆ ಅವರಿಗೆ ಮೂರ್ನಾಲ್ಕು ಏಟುಕೊಟ್ಟಿದ್ದಾರೆ. ಬಂದ ಅತಿಥಿಗಳಿಗೆ ಇಲ್ಲಿನ ಕಾರ್ಯಕ್ಷೇತ್ರ ಮತ್ತು ಕಾರ್ಯಕ್ಷಮತೆ ಬಗ್ಗೆ ವಿವರಿಸದ ಪ್ರಾಂಶುಪಾಲರ ಕ್ರಮಕ್ಕೆ ಶಾಸಕ ಕೋಪಗೊಂಡು ಕೈ ಮಾಡಿದ್ದಾರೆ.
ಶಾಸಕರ ದಿಢೀರ್ ಕೋಪದಿಂದ ಒಂದು ಕ್ಷಣ ಗಲಿಬಿಲಿಗೊಂಡ ಪ್ರಾಂಶುಪಾಲರು ನಗುತ್ತಲೇ ಪರಿಸ್ಥಿತಿ ತಿಳಿಗೊಳಿಸುವಲ್ಲಿ ಯಶಸ್ವಿಯಾದರು. ನಂತರ ಶಾಸಕರು ಮತ್ತು ಅತಿಥಿಗಳು ಕೇಂದ್ರದಲ್ಲಿರುವ ಎಲ್ಲಾ ವಿಭಾಗಗಳಿಗೂ ಭೇಟಿ ನೀಡಿ ಪ್ರಾಂಶುಪಾಲರು, ಅಧ್ಯಾಪಕರದಿಂದ ವಿವರಣೆ ಪಡೆದು ತೃಪ್ತರಾಗಿ ಹೊರನಡೆದರು. ಇದನ್ನು ಓದಿ – ಮಹಾರಾಷ್ಟ್ರದಲ್ಲೂ 10 ಶಾಸಕರ ಜತೆ ಶಿವಸೇನಾ ಸಚಿವ ಸೂರತ್ ಎಸ್ಕೇಪ್
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ 30 ಕೋಟಿ ರು ವೆಚ್ಚದಲ್ಲಿ ಈ ಐಟಿಐ ಕೇಂದ್ರವನ್ನು ಸ್ಥಾಪಿಸಲಾಗಿದೆ. ರಾಜ್ಯಾದ್ಯಂತ ಸುಮಾರು 150 ಕೇಂದ್ರಗಳು ಸ್ಥಾಪನೆಯಾಗಿವೆ. ಈ ಕೇಂದ್ರಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಏಕ ಕಾಲಕ್ಕೆ ವರ್ಚುವಲ್ ಕಾರ್ಯಕ್ರಮದಲ್ಲಿ ಉದ್ಘಾಟಿಸಿದರು.
ಯುವಜನರಿಗೆ ಅತ್ಯಾಧುನಿಕ ತರಬೇತಿ ನೀಡಲು ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಲಾಗಿದ್ದು, 6 ವಿವಿಧ ಕುಶಲಕರ್ಮಿಗಳಿಗೆ ಈ ಕೇಂದ್ರಗಳು ತರಬೇತಿ ನೀಡಲಿವೆ. ಉದ್ಯೋಗಾವಶಕ್ಕೆ ಅನುಗುಣವಾಗಿ ಇಲ್ಲಿ ಕುಶಲಕರ್ಮಿಗಳು ತರಬೇತಿ ಪಡೆದು ಸ್ವಂತ ಉದ್ದಿಮೆ ಸ್ಥಾಪಿಸುವ ಮೂಲಕ ಸ್ವಾವಲಂಭಿ ಬದುಕು ಸಾಗಿಸಲು ನೆರವಾಗಲಿವೆ.
ಯೋಗವನ್ನು ಪ್ರತಿದಿನ ನಿರಂತರವಾಗಿ ಮಾಡಿದರೆ ಯಾವುದೇ ಖಾಯಿಲೆ ಬರುವುದಿಲ್ಲ. ಉತ್ತಮ ಆರೋಗ್ಯದೊಂದಿಗೆ ನಗು ಮುಖದಿಂದ ಇರಲು ಸಾಧ್ಯವಾಗುತ್ತದೆ ಎಂದು ರೇಷ್ಮೆ, ಯುವಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ. ಕೆ.ಸಿ.ನಾರಾಯಣಗೌ ಮಂಗಳವಾರ ತಿಳಿಸಿದರು.
ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಭಾರತ ಸರ್ಕಾರ, ಆಯುಷ್ ಸಚಿವಾಲಯ, ಕರ್ನಾಟಕ ಸರ್ಕಾರ,ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ಜಿಲ್ಲೆಯ ಯೋಗ ನಿರತ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಡೆದ 8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಸಚಿವರು ಮಾತನಾಡಿದರು.
ದೇಶದಲ್ಲಿ ಯೋಗಿಗಳು, ಋಷಿ ಮುನಿಗಳು ಯೋಗವನ್ನು ಹೆಚ್ಚಾಗಿ ಅಳವಡಿಸಿಕೊಂಡು 125ಕ್ಕೂ ಹೆಚ್ಚು ವರ್ಷಗಳು ಬದುಕಿದ್ದಾರೆ ಅದಕ್ಕೆ ಯೋಗವೇ ಕಾರಣ. ಹಾಗಾಗಿ ನಾವೆಲ್ಲರೂ ಯೋಗಕ್ಕೆ ಹೆಚ್ಚಿನ ಮಹತ್ವ ನೀಡಿ ಶಕ್ತಿ ತುಂಬಬೇಕಿದೆ ಎಂದರು.
ದೇಹದಲ್ಲಿ ಖಾಯಿಲೆ ನಿವಾರಣೆ ಜೊತೆಗೆ ನಮ್ಮ ಇಂದ್ರಿಯಗಳು ಬಹಳ ಚೆನ್ನಾಗಿ ಕೆಲಸ ಮಾಡಬೇಕಾದರೆ ನಿರಂತವಾಗಿ ಯೋಗಾಭ್ಯಾಸ ಮಾಡಬೇಕು. ಶಾಲೆ ಮತ್ತು ಕಾಲೇಜಿನಲ್ಲಿ ವಿಧ್ಯಾರ್ಥಿಗಳಿಗೆ ಪ್ರತಿದಿನ ಅರ್ಧಗಂಟೆಗಳ ಯೋಗಾಭ್ಯಾಸ ಮಾಡಿಸಿದರೆ ಅವರಿಗೆ ಏಕಾಗ್ರತೆ, ಶ್ರದ್ಧೆ ನೆನೆಪಿನ ಶಕ್ತಿ ಹೆಚ್ಚಾಗುತ್ತದೆ. ಯೋಗ ಎಂಬುದು ಪ್ರಾಚೀನವಾದ ಕಲೆ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ತಿಳಿಸಿದರು.
ಉಪನಿಷತ್ತುಗಳು, ಋಗ್ವೇದ ದಲ್ಲಿಯೂ ಸಹ ಯೋಗಾಭ್ಯಾಸದ ಬಗ್ಗೆ ಪ್ರಸ್ತಾಪವಿದೆ. ನಮ್ಮ ದೇಶದ ಋಷಿ – ಮುನಿಗಳು ನಿರಂತರವಾಗಿ ಯೋಗಾಭ್ಯಾಸ ಮಾಡಿರುವುದು ನಮಗೆಲ್ಲರಿಗೂ ತಿಳಿದಿರುವ ವಿಷಯವಾಗಿದೆ ಎಂದರು.
ಇತ್ತೀಚಿನ ದಿನದಲ್ಲಿ ಯುವಕರು ದೈಹಿಕ ಸದೃಢತೆಗಾಗಿ ಅನೇಕ ಉಪಕರಣಗಳನ್ನು ಬಳಸುತ್ತಾರೆ. ಆದರೆ ಯೋಗಾಭ್ಯಾಸದಿಂದ ದೈಹಿಕ ಸದೃಢತೆ ಜೊತೆಗೆ ಮಾನಸಿಕವಾಗಿಯೂ ಸಹ ಶಾಂತಿಯಿಂದ ಇರಬಹುದಾಗಿದೆ ಎಂದರು.
ಮದ್ದೂರಿನ ಶಿವಪುರ ಸತ್ಯಾಗ್ರಹ ಸೌದ ಆವರಣ, ಕೆ ಆರ್.ಪೇಟೆಯ ಲಕ್ಷ್ಮಿಜನಾರ್ಧನಸ್ವಾಮಿ ದೇವಸ್ಥಾನ ಹಾಗೂ ಆದಿ ಪ್ರಸಿದ್ಧ ಶ್ರೀರಂಗನಾಥಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಈ ಭಾರಿ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಯೋಗ ದಿನಾಚರಣೆಯನ್ನು ಬಹಳ ಯಶಸ್ವಿಯಾಗಿ ಆಚರಿಸಲಾಯಿತು ಎಂದರು.
ಯೋಗ ಎಂಬುದು ಸಂಸ್ಕೃತದ ಯುಗ್ ಎಂಬ ಪದದಿಂದ ಬಂದಿದೆ. ಯೋಗ ಎಂದರೆ ಒಗ್ಗೂಡಿಸುವುದು ಎಂದರ್ಥ. ನಮ್ಮ ಶರೀರ,ಮನಸು,ಆತ್ಮವನ್ನು ಒಗ್ಗಟ್ಟಾಗಿ ಇಟ್ಟುಕೊಳ್ಳುವುದೇ ನಾವು ಯೋಗದಿಂದ ತಿಳಿದುಕೊಳ್ಳುವ ವಿಷಯವಾಗಿದೆ.ಮನಸ್ಸನ್ನು ನಿಯಂತ್ರಣದಲ್ಲಿಡಲು ಯೋಗ ಮತ್ತು ಧ್ಯಾನದಿಂದ ಮಾತ್ರ ಸಾಧ್ಯ ಎಂದು ಜಿ.ಪಂ.ಸಿಇಒ ದಿವ್ಯಪ್ರಭು ತಿಳಿಸಿದರು.
ಮನುಷ್ಯರಿಗೆ ದೇಹ ಒಂದು ಕಡೆ ಮನಸ್ಸು ಮತ್ತೊಂದು ಕಡೆ ಇರುತ್ತದೆ ಇದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತದೆ ಆಗಾಗಿ ದೇಹ ಮತ್ತು ಮನಸ್ಸನ್ನು ಹತೋಟಿಯಲ್ಲಿಡಲು ಯೋಗ ಮತ್ತು ಧ್ಯಾನ ದಿಂದ ಮಾತ್ರಸಾಧ್ಯ ಎಂದರು
ಯೋಗ ಮತ್ತು ಧ್ಯಾನವನ್ನು ದಿನನಿತ್ಯ ಮಾಡೋಣ ಇದೊಂದು ಅಭ್ಯಾಸವಾಗಿ ಮಾಡಿಕೊಂಡು ನಮ್ಮ ಜೀವನವನ್ನು ಹಾಗೂ ಸಮಾಜವನ್ನು ಸದೃಢವಾಗಿ ಮಾಡೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ವಿ.ಆರ್.ಶೈಲಜ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಪಾಂಡವಪುರ ಉಪ ವಿಭಾಗಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ, ತಹಶೀಲ್ದಾರ್ ಗಳಾದ ಶ್ವೇತ ಎನ್.ರವೀಂದ್ರ, ನಯನ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಾ, ಯೋಗ ಶಿಕ್ಷಕರಾದ ಶಂಕರ ನಾರಾಯಣ ಶಾಸ್ತ್ರಿ, ಪುರಸಭೆ ಉಪಾಧ್ಯಕ್ಷರಾದ ಎಂ.ಕೃಷ್ಣ, ಉಪಅರಣ್ಯ ಸಂರಕ್ಷಣಾಧಿಕಾರಿ ಋತ್ರನ್, ಹಿರಿಯ ಮುಖಂಡರಾದ ಡಾ.ಸಿದ್ದರಾಮಯ್ಯ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment