ಮಂಡ್ಯ ಜಿಲ್ಲೆಯಲ್ಲೂ ಆಮ್ಲಜನಕದ ಕೊರತೆ ನೀಗಲು ಕೊರೋನಾ ಸೋಂಕಿತ ಗಾಗಿ ಪ್ರತಿನಿತ್ಯ ಸ್ವಂತ ಹಣದಲ್ಲಿ 2000 ಲೀಟರ್ ಅ್ಯಕ್ಸಿಜನ್ ಪ್ರಾಯೋಜನೆ ಮಾಡಲು ಮಂಡ್ಯ ಸಂಸದೆ ಸುಮಲತಾ ನಿರ್ಧಾರ ಮಾಡಿದ್ದಾರೆ.
ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿ ಈಗ ಎಂ.ಪಿ ಇಲ್ಲ. ಬೇರೆ ಆರ್ಥಿಕ ಮೂಲಗಳು ನಿಂತು ಹೋಗಿವೆ. ಹೀಗಾಗಿ ನನ್ನ ಸ್ವಂತ ದುಡ್ಡಿನಿಂದ ಪ್ರತಿದಿನ 2,000 ಲೀಟರ್ (2KL ಆಕ್ಸಿಜನ್) ವ್ಯವಸ್ಥೆ ಮಾಡಲು ನಿರ್ಧರಿಸಿದ್ದೇನೆ ಎಂದಿದ್ದಾರೆ.
ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು-ನೋವು ಜಿಲ್ಲೆಯಲ್ಲಿ ಸಂಭವಿಸದಂತೆ ಅಧಿಕಾರಿಗಳಿಗೆ ಎಚ್ಚರ ವಹಿಸಲು ಸಭೆಯಲ್ಲಿ ಸೂಚಿಸಿರುವು ದಾಗಿ ಸುಮಲತಾ ಹೇಳಿದ್ದಾರೆ.
ಸಂಸದೆಯಾಗಿ ನಾನು ಮಾಡುತ್ತಿರುವುದು ನನ್ನ ಕರ್ತವ್ಯ ಮಾತ್ರ. ಮಾಡುವ ಪ್ರತಿ ಕೆಲಸದಲ್ಲೂ ರಾಜಕೀಯ ಲಾಭ ಪಡೆಯುವ ಅವಶ್ಯಕತೆ ನನಗಿಲ್ಲ. ಕೋವಿಡ್ ನನ್ನು ಕೂಡ ರಾಜಕೀಯ ದಾಳವಾಗಿ ಬಳಸುತ್ತಿರುವವರಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಈ ಸಂದರ್ಭದಲ್ಲಾದರೂ ಪಕ್ಷ, ಜಾತಿ ಎಲ್ಲವನ್ನೂ ಪಕ್ಕಕಿಟ್ಟು ಎಲ್ಲರೂ ಜನರ ರಕ್ಷಣೆಗಾಗಿ ಕೈ ಜೋಡಿಸಲು ಮನವಿ ಮಾಡುತ್ತೇನೆ. ಮಾನವೀಯತೆ ಮೇರೆಯೋಣ.
ಈ ಮಹಾಮಾರಿ ಯಾರಿಗೂ ಪಕ್ಷಪಾತ ಮಾಡದು. ಎಲ್ಲರನ್ನೂ ಸಮನಾಗಿ ಕಾಡುತ್ತಿದೆ. ಎಲ್ಲರೂ ಕೈ ಜೋಡಿಸಿ ಇದನ್ನು ತೊಲಗಿಸೋಣ ಎನ್ನುವುದು ಸಂಸದೆ ಸುಮಲತಾ ಮನವಿಯಾಗಿದೆ.
Join WhatsApp group of Newsnap Kannada https://chat.whatsapp.com/CCR8jY9CI6HGUbm5jWYjSe
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
This website uses cookies.
Leave a Comment