Mysuru

Silent ನಿಂದ violent ಗೆ ತಿರುಗಿದ ಮಂಡ್ಯ ಪಾಲಿಟಿಕ್ಸ್ : MP ಸುಮಲತಾ ಮೇಲೆ ಹಲ್ಲೆ ದೂರು ದಾಖಲು

ಸಂಸದೆ ಸುಮಲತಾ ಮತ್ತು ಜೆಡಿಎಸ್​​​ ಸಮರ ತಾರಕಕ್ಕೇರಿದೆ ಚರಂಡಿ ಕಾಮಗಾರಿ ಗುದ್ದಲಿ ಪೂಜೆ ವೇಳೆ ಕೆ.ಆರ್. ನಗರದ ಮುಂಜನಹಳ್ಳಿಯಲ್ಲಿ ಗಲಾಟೆಯಾಗಿದೆ.

ಸಾರಾ ಬೆಂಬಲಿಗರಿಂದ ಸುಮಲತಾ ಮೇಲೆ ಹಲ್ಲೆ ಯತ್ನ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಸಾಲಿಗ್ರಾಮ ಠಾಣೆಗೆ ತೆರಳಿ ಸುಮಲತಾ ದೂರು ನೀಡಿದ್ದಾರೆ.

ಮೈಸೂರಿನತ್ತ ಈ ಕದನ ಶಿಫ್ಟ್​ ಆಗಿದೆ. ಈ ಮೊದಲು ಮಾತಿಗೆ, ಪ್ರತಿಭಟನೆಗೆ ಸೀಮಿತವಾಗಿದ್ದ ಈ ಕದನ, ಈ ಬಾರಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.

ಮಂಡ್ಯ ಲೋಕಸಭೆ ವ್ಯಾಪ್ತಿಗೆ ಬರುವ ಮೈಸೂರಿನ ಕೆ.ಆರ್​ ನಗರದ ಚೌಕಹಳ್ಳಿ ಗ್ರಾಮದಲ್ಲಿ ನಡೆಯಬೇಕಿದ್ದ ಗುದ್ದಲಿ ಪೂಜೆ ಗುದ್ದಾಟಕ್ಕೆ ಕಾರಣವಾಗಿದೆ.

50 ಲಕ್ಷ ವೆಚ್ಚದ ನೀರಾವರಿ‌ ಇಲಾಖೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಲಾಗಿದೆ ಚರಂಡಿ, ಸಿಮೆಂಟ್ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಕಾಮಗಾರಿಗಾಗಿ ಚೌಕಹಳ್ಳಿ, ಬ್ಯಾಡಹಳ್ಳಿ, ಹಂಪಾಪುರ ಸೇರಿ ಕೆಲವೆಡೆ ಕಾರ್ಯಕ್ರಮ ನಡೆಯಿತು.

ಸುಮಲತಾ

ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರನ್ನು ಆಹ್ವಾನಿಸಿಲ್ಲ, ಶಿಷ್ಟಾಚಾರ ಪಾಲಿಸಿಲ್ಲವೆಂದು ಸಾರಾ ಮಹೇಶ್​​​ ಬೆಂಬಲಿಗರ ತಕರಾರು ಮಾಡಿ ನಂತರ ಗ್ರಾಮಕ್ಕೆ ಬಾರದಂತೆ ಸಂಸದರು ಹಾಗೂ ಜೊತೆಯಲ್ಲಿದ್ದವರಿಗೆ ತಡೆ ನೀಡಲಾಗಿತ್ತು.

ಈ ವೇಳೆ ಸಂಸದೆ ಸುಮಲತಾ ಪರವಾಗಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ, ಪರಸ್ಪರ ಕಿತ್ತಾಟ ತಳ್ಳಾಟ, ಸಂಸದರ ಕಾರು ಚಾಲಕ ನಂಜುಂಡಗೆ ಗಾಯ, ಕೆ.ಆರ್.ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ,


ಕಾರ್ಯಕ್ರಮ ಆರಂಭದಿಂದಲೇ ಶಾಮಿಯಾನ, ಚೇರ್​​​ ವಿಚಾರವಾಗಿ ಅಧಿಕಾರಿಗಳಿಗೆ ತರಾಟೆ ಮೂಲಕ ಶುರುವಾದ ಜಟಾಪಟಿ, ಜೆಡಿಎಸ್ ಕಾರ್ಯಕರ್ತರ ನಡುವೆ ವಿಸ್ತರಿಸಿತು. ಈ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಪ್ರಕರಣ ಸಾಲಿಗ್ರಾಮ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024