ಇದನ್ನು ಓದಿ –ಉಪಕಾರ ಮಾಡಿದ್ದೇ ಬೇರೆಯವರು : ಬಿಲ್ಡಪ್ ತೆಗೆದುಕೊಂಡಿದ್ದೇ ಸಂಸದೆ ಸುಮಲತಾ : ಜನಾಕ್ರೋಷ ?
ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ನ್ಯಾ ಫಣೀಂದ್ರ ,ಅಧಿಕಾರಿಗಳು ಈ ಅರ್ಜಿಗಳಿಗೆ ಸಂಬಂಧಪಟ್ಟ ದೂರುದಾರರಿಗೆ ಪರಿಹಾರ ನೀಡಿ ಲೋಕಾಯುಕ್ತ ಸಂಸ್ಥೆಗೆ ಒಂದು ತಿಂಗಳೊಳಗೆ ವರದಿಯನ್ನು ಸಲ್ಲಿಸಬೇಕು ಪರಿಹಾರ ನೀಡಿದಂತಹ ಪ್ರಕರಣಗಳನ್ನು ಅಲ್ಲಿಯೇ ಮುಕ್ತಾಯ ಗೊಳಿಸುತ್ತೇವೆ ಎಂದರು.
ಲೋಕಾಯುಕ್ತ ಕಚೇರಿಗೆ ದಾಖಲಾಗಿದ್ದ 84 ಪ್ರಕರಣಗಳು ವಿಚಾರಣೆಯನ್ನು ಸೋಮವಾರ ನಡೆಸಲಾಯಿತು.ಒಂದೊಂದು ಪ್ರಕರಣಗಳನ್ನು ಪ್ರತ್ಯೇಕವಾಗಿ ವಿಚಾರಣೆ ಮಾಡಿ ಸುಮಾರು 35 ಪ್ರಕರಣಗಳನ್ನು ಪರಿಹಾರಕ್ಕೆ ತೀರ್ಮಾನವಾಗಿದೆ ಎಂದರು.
ನೋಟಿಸ್ ಜಾರಿ ಮಾಡಿದಂತಹ ಅಧಿಕಾರಿಗಳು ಕೆಲವು ಪ್ರಕರಣಗಳನ್ನು ದೂರುದಾರರಿಗೆ ಪರಿಹಾರವನ್ನು ಸಹ ನೀಡಿದ್ದಾರೆ.ಇದು ಒಂದು ಹೊಸ ಆಯಾಮವನ್ನು ಸೃಷ್ಟಿ ಮಾಡಿದೆ ಎಂದರೆ ತಪ್ಪಾಗಲಾರದು.
ಕಳೆದ ಎರಡು ದಿನಗಳ ಕಾಲ ಮಂಡ್ಯ ಜಿಲ್ಲೆಯಲ್ಲಿ ನಡೆದ ಪ್ರಕ್ರಿಯೆ ಹಾಗೂ ಜನರಿಗೆ ಲೋಕಾಯುಕ್ತರ ಮೇಲೆ ಇಟ್ಟಿರುವ ವಿಶ್ವಾಸ ಬಹಳ ಸಂತೋಷದ ಸಂಗತಿಯಾಗಿದೆ. ಪ್ರವಾಸದ ವೇಳೆ ಕೆಲವು ಗ್ರಾಮ ಪಂಚಾಯಿತಿಗಳಿಗೂ ಸಹ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು. ಗ್ರಾಮ ಪಂಚಾಯಿತಿಗಳನ್ನು ಬಹಳ ಉತ್ಕೃಷ್ಟ ಮಟ್ಟದಲ್ಲಿ ಅಭಿವೃದ್ಧಿಪಡಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು