Main News

ಒಂದು ತಿಂಗಳೊಳಗೆ ಮಂಡ್ಯದ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ : ಉಪಲೋಕಾಯುಕ್ತ ನ್ಯಾ.ಫಣೀಂದ್ರ

ಮಂಡ್ಯ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಪಡೆದಂತಹ 75 ಕುಂದುಕೊರತೆ ಅರ್ಜಿಗಳನ್ನು ಈಗಾಗಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಅರ್ಜಿಗಳನ್ನು ರವಾನೆ ಮಾಡಲಾಗಿದೆ. ಸಾರ್ವಜನಿಕರು ನೀಡಿದಂತಹ ಅರ್ಜಿಗಳ ಕುರಿತು ಚರ್ಚಿಸಿ ಅವರಿಗೆ ಒಂದು ತಿಂಗಳೊಳಗೆ ಶೀಘ್ರದಲ್ಲಿ ಪರಿಹಾರ ನೀಡಲು ಪ್ರಯತ್ನಿಸುತ್ತೇವೆ ಎಂದು ಕರ್ನಾಟಕ ಉಪಲೋಕಾಯುಕ್ತ ನ್ಯಾ ಕೆ ಎನ್ ಫಣೀಂದ್ರ ತಿಳಿಸಿದರು.

ಇದನ್ನು ಓದಿ –ಉಪಕಾರ ಮಾಡಿದ್ದೇ ಬೇರೆಯವರು : ಬಿಲ್ಡಪ್ ತೆಗೆದುಕೊಂಡಿದ್ದೇ ಸಂಸದೆ ಸುಮಲತಾ : ಜನಾಕ್ರೋಷ ?

ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ನ್ಯಾ ಫಣೀಂದ್ರ ,ಅಧಿಕಾರಿಗಳು ಈ ಅರ್ಜಿಗಳಿಗೆ ಸಂಬಂಧಪಟ್ಟ ದೂರುದಾರರಿಗೆ ಪರಿಹಾರ ನೀಡಿ ಲೋಕಾಯುಕ್ತ ಸಂಸ್ಥೆಗೆ ಒಂದು ತಿಂಗಳೊಳಗೆ ವರದಿಯನ್ನು ಸಲ್ಲಿಸಬೇಕು ಪರಿಹಾರ ನೀಡಿದಂತಹ ಪ್ರಕರಣಗಳನ್ನು ಅಲ್ಲಿಯೇ ಮುಕ್ತಾಯ ಗೊಳಿಸುತ್ತೇವೆ ಎಂದರು.

ಲೋಕಾಯುಕ್ತ ಕಚೇರಿಗೆ ದಾಖಲಾಗಿದ್ದ 84 ಪ್ರಕರಣಗಳು ವಿಚಾರಣೆಯನ್ನು ಸೋಮವಾರ ನಡೆಸಲಾಯಿತು.ಒಂದೊಂದು ಪ್ರಕರಣಗಳನ್ನು ಪ್ರತ್ಯೇಕವಾಗಿ ವಿಚಾರಣೆ ಮಾಡಿ ಸುಮಾರು 35 ಪ್ರಕರಣಗಳನ್ನು ಪರಿಹಾರಕ್ಕೆ ತೀರ್ಮಾನವಾಗಿದೆ ಎಂದರು.

ನೋಟಿಸ್ ಜಾರಿ ಮಾಡಿದಂತಹ ಅಧಿಕಾರಿಗಳು ಕೆಲವು ಪ್ರಕರಣಗಳನ್ನು ದೂರುದಾರರಿಗೆ ಪರಿಹಾರವನ್ನು ಸಹ ನೀಡಿದ್ದಾರೆ.ಇದು ಒಂದು ಹೊಸ ಆಯಾಮವನ್ನು ಸೃಷ್ಟಿ ಮಾಡಿದೆ ಎಂದರೆ ತಪ್ಪಾಗಲಾರದು.

ಕಳೆದ ಎರಡು ದಿನಗಳ ಕಾಲ ಮಂಡ್ಯ ಜಿಲ್ಲೆಯಲ್ಲಿ ನಡೆದ ಪ್ರಕ್ರಿಯೆ ಹಾಗೂ ಜನರಿಗೆ ಲೋಕಾಯುಕ್ತರ ಮೇಲೆ ಇಟ್ಟಿರುವ ವಿಶ್ವಾಸ ಬಹಳ ಸಂತೋಷದ ಸಂಗತಿಯಾಗಿದೆ. ಪ್ರವಾಸದ ವೇಳೆ ಕೆಲವು ಗ್ರಾಮ ಪಂಚಾಯಿತಿಗಳಿಗೂ ಸಹ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು. ಗ್ರಾಮ ಪಂಚಾಯಿತಿಗಳನ್ನು ಬಹಳ ಉತ್ಕೃಷ್ಟ ಮಟ್ಟದಲ್ಲಿ ಅಭಿವೃದ್ಧಿಪಡಿಸಿದ್ದಾರೆ.

Team Newsnap
Leave a Comment

Recent Posts

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024

14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More

April 27, 2024

ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More

April 26, 2024