ಮಂಡ್ಯ : ಕಾರು ಪಲ್ಟಿಯಾಗಿ ಮೂವರು ಸೆಸ್ಕಾಂ ಸಿಬ್ಬಂದಿಗೆ ಗಾಯ

Team Newsnap
0 Min Read

ಕಾರು ಪಲ್ಟಿಯಾಗಿ ಮೂವರಿಗೆ ತೀವ್ರ ಗಾಯಗಳಾಗಿರುವ ಘಟನೆ ಜಿಲ್ಲೆಯ ಕೆ.ಆರ್​.ಪೇಟೆ ತಾಲೂಕಿನ ಅಗ್ರಹಾರ ಬಾಚಹಳ್ಳಿ ಬಳಿ ನಡೆದಿದೆ.

ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರ ಬಾಚಹಳ್ಳಿ ಬಳಿ ಕಾರಿನ ಆಕ್ಸಲ್​ ತುಂಡಾದ ಕಾರಣ ಹೆದ್ದಾರಿಯಲ್ಲಿ ಕಾರು ಪಲ್ಟಿಯಾಗಿದೆ.

ಈ ವೇಳೆ ಕಾರಿನಲ್ಲಿದ್ದ ಸೆಸ್ಕಾ ಸಿಬ್ಬಂದಿಗೆ ಗಂಭೀರ ಗಾಯಗಳಾಗಿದೆ ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment