ಜಿಲ್ಲೆಯ ಜೀವನಾಡಿಯಾಗಿರುವ ಶ್ರೀರಂಗಪಟ್ಟಣ ( Srirangapatna ) ತಾಲೂಕಿನ ಕೆಆರ್ಎಸ್ ( KRS ) ಜಲಾಶಯ 3 ಬಾರಿ ಭರ್ತಿಯಾಗುವ ಮೂಲಕ ದಾಖಲೆ ಬರೆದಿದೆ.
ಕಾವೇರಿ ಜಲಾನಯನ ( Kaveri River )ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಈ ಕಾರಣ ಕೆಆರ್ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಕಳೆದ 4-5 ದಿನಗಳಿಂದ ಹೆಚ್ಚಳವಾಗಿದೆ.ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಬೆಂಕಿ ದುರಂತ : ಸುಟ್ಟು ಬೂದಿಯಾದ ಫೈಲ್ಗಳು
ಕೆಆರ್ಎಸ್ ಜಲಾಶಯ ಈ ವರ್ಷ 3ನೇ ಬಾರಿಗೆ ಭರ್ತಿಯಾಗಿದೆ. ಈ ವರ್ಷ ಜುಲೈ, ಸೆಪ್ಟೆಂಬರ್ ಹಾಗೂ ಇದೀಗ ಅಕ್ಟೋಬರ್ ತಿಂಗಳಿನಲ್ಲಿ ಕೆಆರ್ಎಸ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ. ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿರುವುದು ಹಳೆ ಮೈಸೂರು ಭಾಗದ ಜನರಲ್ಲಿ ಹಾಗೂ ಮಂಡ್ಯದ ರೈತರಲ್ಲಿ ಮಂದಹಾಸ ಮೂಡಿಸಿದೆ.
124.80 ಗರಿಷ್ಠ ಅಡಿಯ ಕೆಆರ್ಎಸ್ ಡ್ಯಾಂ ( KRS Dam ) ಅಷ್ಟೇ ಅಡಿಗಳಷ್ಟು ತುಂಬಿ ಭರ್ತಿಯಾಗಿದೆ. ಒಳಹರಿವಿನ ಪ್ರಮಾ 36,733 ಕ್ಯೂಸೆಕ್ ಇದ್ದು, ಹೊರ ಹರಿವಿನ ಪ್ರಮಾಣ 33,633 ಕ್ಯೂಸೆಕ್ ಇದೆ. ಕೆಆರ್ಎಸ್ ಡ್ಯಾಂ 49.452 ಟಿಎಂಸಿ ಗರಿಷ್ಠ ಸಂಗ್ರಹದ ಸಾಮರ್ಥ್ಯವಿದೆ ಸಂಪೂರ್ಣವಾಗಿ 49.452 ಟಿಎಂಸಿ ನೀರು ಭರ್ತಿಯಾಗಿದೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ