ಮಾಲೀಕನ ಮೊಮ್ಮಗಳ ಮದುವೆಗೆಂದು ಬ್ಯಾಂಕ್ನಿಂದ ಡ್ರಾ ಮಾಡಿದ್ದ 10 ಲಕ್ಷ ರು ಹಣವನ್ನು ಖದೀಮರು ಕ್ಷಣ ಮಾತ್ರದಲ್ಲಿ ಎಗರಿಸಿಕೊಂಡು ಪರಾರಿಯದ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಂಸ್ಥೆಯೊಂದರ ಮ್ಯಾನೇಜರ್ ಆಗಿರುವ ವ್ಯಕ್ತಿ ಮಾಲೀಕರ ಸೂಚನೆಯಂತೆ ಮದುವೆಗಾಗಿ ವಿವಿಧ ಬ್ಯಾಂಕ್ಗಳಿಂದ 10 ಲಕ್ಷ ರೂಪಾಯಿ ಹಣವನ್ನು ಡ್ರಾ ಮಾಡಿದ್ದರು.
ಹಣ ಡ್ರಾ ಮಾಡಿಕೊಂಡು ಮನೆಗೆ ಹಿಂದಿರುಗುವಾಗ ಕಾರ್ ಟೈರ್ ಪಂಚರ್ ಆದ ಕಾರಣ ಮ್ಯಾನೇಜರ್ ಗಾಡಿ ನಿಲ್ಲಿಸಿದ್ದಾರೆ. ಈ ವೇಳೆ ಹಣವನ್ನು ಕಾರಿನ ಹಿಂಬದಿಯ ಸೀಟ್ನಲ್ಲಿಟ್ಟು ಪಂಚರ್ ಹಾಕಿಸಿ ಟೀ ಕುಡಿಯಲು ಹೋಗಿದ್ದ ಸಂದರ್ಭದಲ್ಲಿ ಬಂದ ಖತರ್ನಾಕ್ ಕಳ್ಳರು ಕಾರಿನ ಹಿಂಭಾಗದ ಗ್ಲಾಸ್ ಹೊಡೆದು ಹತ್ತು ಲಕ್ಷ ರೂಪಾಯಿ ಹಣವನ್ನು ಲಪಟಾಯಿಸಿದ್ದಾರೆ.
ಹಣ ಕಳೆದುಕೊಂಡು ಕಂಗಾಲಾಗಿರುವ ಮ್ಯಾನೇಜರ್ ಈ ಸಂಬಂಧ ಚಂದ್ರಾ ಲೇಔಟ್ ಠಾಣೆಗೆ ದೂರು ನೀಡಿದ್ದಾರೆ.
ಆರೋಪಿಗಳ ಪತ್ತೆಗೆ ಚಂದ್ರಾ ಲೇಔಟ್ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ