ಮಾಲೀಕನ ಮೊಮ್ಮಗಳ ಮದುವೆಗೆಂದು ಬ್ಯಾಂಕ್ನಿಂದ ಡ್ರಾ ಮಾಡಿದ್ದ 10 ಲಕ್ಷ ರು ಹಣವನ್ನು ಖದೀಮರು ಕ್ಷಣ ಮಾತ್ರದಲ್ಲಿ ಎಗರಿಸಿಕೊಂಡು ಪರಾರಿಯದ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಂಸ್ಥೆಯೊಂದರ ಮ್ಯಾನೇಜರ್ ಆಗಿರುವ ವ್ಯಕ್ತಿ ಮಾಲೀಕರ ಸೂಚನೆಯಂತೆ ಮದುವೆಗಾಗಿ ವಿವಿಧ ಬ್ಯಾಂಕ್ಗಳಿಂದ 10 ಲಕ್ಷ ರೂಪಾಯಿ ಹಣವನ್ನು ಡ್ರಾ ಮಾಡಿದ್ದರು.
ಹಣ ಡ್ರಾ ಮಾಡಿಕೊಂಡು ಮನೆಗೆ ಹಿಂದಿರುಗುವಾಗ ಕಾರ್ ಟೈರ್ ಪಂಚರ್ ಆದ ಕಾರಣ ಮ್ಯಾನೇಜರ್ ಗಾಡಿ ನಿಲ್ಲಿಸಿದ್ದಾರೆ. ಈ ವೇಳೆ ಹಣವನ್ನು ಕಾರಿನ ಹಿಂಬದಿಯ ಸೀಟ್ನಲ್ಲಿಟ್ಟು ಪಂಚರ್ ಹಾಕಿಸಿ ಟೀ ಕುಡಿಯಲು ಹೋಗಿದ್ದ ಸಂದರ್ಭದಲ್ಲಿ ಬಂದ ಖತರ್ನಾಕ್ ಕಳ್ಳರು ಕಾರಿನ ಹಿಂಭಾಗದ ಗ್ಲಾಸ್ ಹೊಡೆದು ಹತ್ತು ಲಕ್ಷ ರೂಪಾಯಿ ಹಣವನ್ನು ಲಪಟಾಯಿಸಿದ್ದಾರೆ.
ಹಣ ಕಳೆದುಕೊಂಡು ಕಂಗಾಲಾಗಿರುವ ಮ್ಯಾನೇಜರ್ ಈ ಸಂಬಂಧ ಚಂದ್ರಾ ಲೇಔಟ್ ಠಾಣೆಗೆ ದೂರು ನೀಡಿದ್ದಾರೆ.
ಆರೋಪಿಗಳ ಪತ್ತೆಗೆ ಚಂದ್ರಾ ಲೇಔಟ್ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ