January 28, 2026

Newsnap Kannada

The World at your finger tips!

hejab 1

ಮಂಗಳೂರು : ಹಿಜಬ್‍ಗೆ ಅವಕಾಶ ಇಲ್ಲದ ಕಾಲೇಜಿನಿಂದ ಶೇ 16 ರಷ್ಟು ಟಿಸಿ ಪಡೆದ ವಿದ್ಯಾರ್ಥಿನಿಯರು

Spread the love

ಹಿಜಬ್‍ಗೆ ಅವಕಾಶ ಇಲ್ಲದ ಕಾಲೇಜಿನಿಂದ ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿಯನ್ನು ಹಿಂಪಡೆದಿದ್ದಾರೆ, ಕೆಲವು ತಿಂಗಳ ಹಿಂದಷ್ಟೇ ಪರೀಕ್ಷೆಗಳಿಗೆ ಹಿಜಬ್ ಧರಿಸಲು ಅವಕಾಶವಿಲ್ಲ ಎಂದಿದ್ದಕ್ಕೆ ಅನೇಕ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದರು. ಇದೀಗ ಹಿಜಬ್ ಸಮರ ಮತ್ತೆ ಮುಂದುವರಿದಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಶೇ.16 ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿಯನ್ನು ಹಿಂಪಡೆದಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಮಾತನಾಡಿ, ಟಿಸಿ ಪಡೆಯಬಹುದು ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದ 900 ವಿದ್ಯಾರ್ಥಿನಿಯರ ಪೈಕಿ 145 ಮಂದಿ ಟಿಸಿಯನ್ನು ಹಿಂಪಡೆದಿದ್ದಾರೆ.

ಅದರಲ್ಲಿ ಸರ್ಕಾರಿ ಕಾಲೇಜಿನ 34%, ಅನುದಾನಿತ ಕಾಲೇಜಿನ 13% ವಿದ್ಯಾರ್ಥಿನಿಯರಿದ್ದಾರೆ. ಹಿಜಬ್ ಧರಿಸಲು ಅವಕಾಶ ಇಲ್ಲದ ಕಾರಣ ಮಂಗಳೂರಿನ ಹಿಜಬ್ ಹೋರಾಟಗಾರ್ತಿ ಗೌಸಿಯಾ ಕಾಲೇಜಿನಿಂದ ಟಿಸಿ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿ, ವಿದ್ಯಾರ್ಥಿನಿಯರು ಟಿಸಿ ಪಡೆಯಲು ಸಚಿವ ಬಿ.ಸಿ ನಾಗೇಶ್ ಅವರೇ ಮುಖ್ಯ ಕಾರಣರಾಗಿದ್ದಾರೆ.

ಸಂವಿಧಾನ ನೀಡಿರುವ ಹಕ್ಕಿನ ಪ್ರಕಾರ ಶಿಕ್ಷಣ ಪಡೆಯಲು ನಾಗೇಶ್ ಬಿಡಲಿಲ್ಲ. ತುಂಡು ಬಟ್ಟೆಯನ್ನೇ ದೊಡ್ಡ ವಿವಾದವನ್ನಾಗಿ ನಾಗೇಶ್ ಮಾಡಿದ್ದಾರೆ. ಇದರಿಂದ ಸರ್ಕಾರಕ್ಕೆ ನಷ್ಟವಾಗಲಿದೆ. ಹಲವು ಸರ್ಕಾರಿ ಕಾಲೇಜುಗಳು ಮುಚ್ಚಲಿದೆ. ಇಡೀ ರಾಜ್ಯಾದ್ಯಂತ 30% ಅಧಿಕ ವಿದ್ಯಾರ್ಥಿನಿಯರು ಕಾಲೇಜು ಬಿಟ್ಟಿದ್ದಾರೆ ಎಂದು ಕಿಡಿಕಾರಿದರು.

error: Content is protected !!