ಗುರುವಾರ ನಡೆದ ಮಣಿಪುರ ಸಚಿವ ಸಂಪುಟ ಪುನರ್ರಚನೆಯ ವೇಳೆ ಇಬ್ಬರು ಶಾಸಕರನ್ನು ಸಂಪುಟದಿಂದ ಕೈ ಬಿಟ್ಟಿದೆ. ಇದರಿಂದ ಕೋಪಗೊಂಡ ಎನ್ಪಿಪಿ ಸದಸ್ಯರು ಗೌಹಾಟಿಯಲ್ಲಿ ಸಭೆ ನಡೆಸಿ, ಎನ್ಪಿಪಿ ರಾಷ್ಟ್ರಾಧ್ಯಕ್ಷ ಹಾಗೂ ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರೊಡನೆ ಚರ್ಚೆ ಮಾಡಿದ್ದಾರೆ.
ಭಾನುವಾರ ರಾತ್ರಿ ಸಂಗ್ಮಾ ಅವರೊಂದಿಗಿನ ಮತ್ತೊಂದು ಸುತ್ತಿನ ಮಾತುಕತೆಯ ನಂತರ ಭಾಜಪ-ಎನ್ಪಿಪಿ ಮೈತ್ರಿ ಮುಂದುವರೆಯುತ್ತದೋ ಇಲ್ಲವೋ ಎಂದು ತಿಳಿದು ಬರಲಿದೆ.
ಸಂಪುಟದಿಂದ ಕೈಬಿಟ್ಟ ಹಿನ್ನಲೆಯಲ್ಲಿ ಎನ್ಪಿಪಿ ಶಾಸಕರೊಬ್ಬರು ಅಸಮಾಧಾನಗೊಂಡು ‘ಅಮಿತ್ ಶಾ ನಮಗೆ ಭರವಸೆ ನೀಡಿದ್ದರು. ಆದರೆ ಈಗ ನಮಗೆ ದ್ರೋಹ ಮಾಡಲಾಗಿದೆ. ನಮ್ಮನ್ನು ಸಂಪುಟದಿಂದ ಕೈ ಬಿಡಲಾಗಿದೆ’ ಎಂದು ತಿಳಿಸಿದರು.
ಗುರುವಾರ ನಡೆದ ಸಂಪುಟ ಸಭೆಯಲ್ಲಿ ಬಿಜೆಪಿಯ ಮೂರು ಶಾಸಕರು ಸೇರಿ ಒಟ್ಟು 6 ಶಾಸಕರನ್ನು ಸಂಪುಟದಿಂದ ಕೈ ಬಿಡಲಾಗಿದೆ.
ಸಧ್ಯ, ಎನ್ಪಿಪಿಯ ಶಾಸಕ, ಉಪಮುಖ್ಯಮಂತ್ರಿ ವೈ ಜೋಯ್ ಕುಮಾರ್ ಸಿಂಗ್, ಸಚಿವ ಲೆಟ್ಪೌ ಹೌಕಿಪ್, ಸಂಪುಟದಿಂದ ಕೈಬಿಡಲಾದ ಎಲ್ ಜಯಂತಕುಮಾರ್, ಎನ್ ಕಯಿಸಿ ಗುವಾಹಟಿಯಲ್ಲಿದ್ದಾರೆ.


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ