ಫೇಸ್ಬುಕ್ ಲೈವ್ನಲ್ಲಿ ಕರ್ನಾಟಕ ಬಾರ್ ಕೌನ್ಸಿಲ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದ ಮೇಲೆ ಸಿಡಿ ಪ್ರಕರಣ ಸಂತ್ರಸ್ತೆ ಯುವತಿ ಪರ ವಕೀಲ ಮಂಜುನಾಥ್ ಆರ್. ಅವರನ್ನು ಬಾರ್ ಕೌನ್ಸಿಲ್ ನಿಂದ ಅಮಾನತ್ತು ಮಾಡಲಾಗಿದೆ.
ವಕೀಲ ಮಂಜುನಾಥ್ ಆರ್. ಬಾರ್ ಕೌನ್ಸಿಲ್ ವಿರುದ್ಧ ಹಣ ದುರ್ಬಳಕೆ ಆರೋಪ ಮಾಡಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ 10 ದಿನಗಳಲ್ಲಿ ಉತ್ತರ ನೀಡಲು ಕರ್ನಾಟಕ ಬಾರ್ ಕೌನ್ಸಿಲ್ ಮಂಜುನಾಥ್ಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಅವರನ್ನು ವಿಚಾರಣೆ ಮುಕ್ತಾಯದ ತನಕ ಅಮಾನತ್ತು ಮಾಡಿ ಆದೇಶ ಹೊರಡಿಸಿದೆ.
ದಾಖಲೆ ಪ್ರಕಾರ ಮಂಜುನಾಥ್ ಯುವತಿಗೆ ವಕಾಲತ್ತು ಸಹಿ ಹಾಕಿದ್ದ ವಕೀಲರಾಗಿದ್ದಾರೆ. ಇನ್ನೂ ಜಗದೀಶ್ ಇವರ ಅರ್ಜಿಯಲ್ಲಿ ತಾನೇ ಯುವತಿ ಪರ ವಕೀಲ ಅಂತಾ ಹೇಳಿದ್ದರು. ಫೇಸ್ಬುಕ್ ಲೈವ್ನಲ್ಲಿ ವಕೀಲ ಮಂಜುನಾಥ್ ಅವರು ಬಾರ್ ಕೌನ್ಸಿಲ್ನಲ್ಲಿ ಅನುದಾನಗಳ ದುರ್ಬಳಕೆಯಾಗಿದೆ ಎಂದು ಆರೋಪಿಸಿದ್ದರು.
ಈ ಆರೋಪದಿಂದ ಕೌನ್ಸಿಲ್ ವಿಶ್ವಾಸಾರ್ಹತೆಗೆ ಧಕ್ಕೆಯಾಗಿದೆ. ಅಲ್ಲದೇ ಫೇಕ್ ಸ್ಟಾಂಪ್ಸ್ ಬಗ್ಗೆಯೂ ಆರೋಪ ಮಾಡಿ ತೆಲಗಿ ಚಾಪಾ ಕಾಗದ ಪ್ರಕರಣಕ್ಕೆ ಹೋಲಿಕೆ ಮಾಡಿದ್ದಾರೆ. ಇದರಿಂದ ರಾಜ್ಯದ ಎಲ್ಲಾ ವಕೀಲರು ಕೌನ್ಸಿಲ್ಗೆ ಕರೆ ಮಾಡುತ್ತಿದ್ದಾರೆ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment