ಮನೋಹರ್ ಲಾಲ್ ಖಟ್ಟರ್ ಹರಿಯಾಣ ಸಿಎಂ ಸ್ಥಾನಕ್ಕೆ ರಾಜೀನಾಮೆ

Team Newsnap
1 Min Read

ಬಿಜೆಪಿ ಹಿರಿಯ ನಾಯಕ ಮನೋಹರ್ ಲಾಲ್ ಖಟ್ಟರ್ ಅವರು ಲೋಕಸಭಾ ಚುನಾವಣೆಗೆ ಮುನ್ನ ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ,ರಾಜೀನಾಮೆ ಪತ್ರವನ್ನು ಅವರು ರಾಜ್ಯಪಾಲರಿಗೆ ನೀಡಿದ್ದಾರೆ .

ರಾಜೀನಾಮೆ ಹಿನ್ನಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಕರ್ಣದಿಂದ ಕಣಕ್ಕಿಳಿಸಬಹುದು ಮತ್ತು ನಯಾಬ್ ಸೈನಿ ಅಥವಾ ಸಂಜಯ್ ಭಾಟಿಯಾ ಅವರನ್ನು ಹರಿಯಾಣದ ಮುಂದಿನ ಮುಖ್ಯಮಂತ್ರಿಯಾಗಿ ನೇಮಿಸಬಹುದು.

ಕೇಂದ್ರ ಸಚಿವ ಅರ್ಜುನ್ ಮುಂಡಾ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಹರಿಯಾಣಕ್ಕೆ ತೆರಳುತ್ತಿದ್ದು, ರಾಜ್ಯದ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸುವ ನಿರೀಕ್ಷೆಯಿದೆ.

ಮಾರ್ಚ್ 11 ರಂದು ಚೌಟಾಲಾ ಅವರು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಸೀಟು ಹಂಚಿಕೆ ಮಾತುಕತೆ ನಡೆಸಿ ,2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಹತ್ತು ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು

ಹರಿಯಾಣದಲ್ಲಿ ಬಿಜೆಪಿ-ಜನನಾಯಕ ಜನತಾ ಪಕ್ಷ (ಜೆಜೆಪಿ)ಯ ಆಡಳಿತ ಸಮ್ಮಿಶ್ರದಲ್ಲಿ ಬಿರುಕು ಕಾಣಿಸಿಕೊಂಡಿದ್ದು , ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಎಲ್ಲಾ ಸಚಿವರು ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದಾರೆ .

ಮಾರ್ಚ್ 11 ರಂದು ಚೌಟಾಲಾ ಅವರು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಸೀಟು ಹಂಚಿಕೆ ಮಾತುಕತೆ ನಡೆಸಿ , 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಹತ್ತು ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು.ಮಂಡ್ಯದ ವಿಸಿ ನಾಲೆಗೆ ಕಾರು ಬಿದ್ದು ಓರ್ವ ದುರ್ಮರಣ

ಬಿಜೆಪಿ ಮತ್ತು ಜೆಜೆಪಿ (ಜನನಾಯಕ ಜನತಾ ಪಕ್ಷ) ಎರಡೂ ಪಕ್ಷಗಳ ವರಿಷ್ಠರು ಆಯಾ ಶಾಸಕರ ಪ್ರತ್ಯೇಕ ಸಭೆಗಳನ್ನು ಕರೆದಿದ್ದು ,ಅದಕ್ಕೂ ಮುನ್ನ ಖಟ್ಟರ್ ಅವರು ತಮ್ಮ ನಿವಾಸದಲ್ಲಿ ಬಿಜೆಪಿಯ ಎಲ್ಲ ಸಚಿವರ ಸಭೆ ನಡೆಸಲಿದ್ದಾರೆ.

Share This Article
Leave a comment