ನವದೆಹಲಿ : ನಿನ್ನೆ ಭಾರಿ ಭದ್ರತಾ ಲೋಪ ಘಟನೆ ಲೋಕಸಭೆಯಲ್ಲಿ ನಡೆದ ಬಳಿಕ , ಆರೋಪಿಗಳ ಕುರಿತು ಮಾಹಿತಿ ಒಂದೊಂದಾಗಿ ಹೊರಬರುತ್ತಿದೆ .
ಆರೋಪಿ ಮನೋರಂಜನ್ ಮೈಸೂರಿನ ಸಂಸದ ಪ್ರತಾಪ್ ಸಿಂಹ ಕಚೇರಿಗೆ ಆಗಾಗ ಭೇಟಿ ನೀಡುತ್ತಿದ್ದ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಲಾಗಿದೆ .
ಹೊಸ ಸಂಸತ್ ಭವನವನ್ನು ನೋಡಬೇಕೆಂಬ ಮನವಿ ಮೇರೆಗೆ ,ಆರೋಪಿ ಮನೋರಂಜನ್ ಮತ್ತು ಸ್ನೇಹಿತ ಆರೋಪಿ ಸಾಗರ್ ಶರ್ಮಾನನ್ನು ಸಂಸದರ ಕಚೇರಿಗೆ ಪರಿಚಯಿಸಿದ್ದ ಅವರಿಗೆ ಪಾಸ್ಗಳನ್ನು ನೀಡಲಾಗಿತ್ತು ಎಂದು ಮೂಲಗಳಿಂದ ತಿಳಿದುಬಂದಿದೆ.
ಒಟ್ಟಾರೆ 3 ಪಾಸ್ಗಳನ್ನು ವಿತರಿಸಲಾಗಿದ್ದು , ಮೂರನೇ ಪಾಸ್ ಪಡೆದಿದ್ದ ಮಹಿಳೆ ಮಗುವಿನ ಜೊತೆ ಬಂದಿದ್ದರಿಂದ ಮಗುವಿನ ಹೆಸರು ನಮೂದಿಸದ ಕಾರಣ ಪ್ರವೇಶ ಸಿಗದೆ ಹಿಂದಿರುಗಿದರು .ಲೋಕಸಭಾ ಭದ್ರತಾ ಲೋಪ – 8 ಭದ್ರತಾ ಸಿಬ್ಬಂದಿ ಅಮಾನತು
ಸಂಸತ್ ಪ್ರವೇಶದ ಪಾಸ್ಗಾಗಿ ಸಂಸದ ಪ್ರತಾಪ್ ಸಿಂಹ ಮತ್ತು ಅವರ ಕಚೇರಿಗೆ ಮನೋರಂಜನ್ ಮೂರು ತಿಂಗಳಿನಿಂದ ದುಂಬಾಲು ಬಿದ್ದಿದ್ದ ಎಂದು ಬೆಳಕಿಗೆ ಬಂದಿದೆ.



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು