ಈ ವರ್ಷ ನವೆಂಬರ್ 20 ರಿಂದ ಡಿಸೆಂಬರ್ 1 ರವರೆಗೆ ತುಂಗಭದ್ರಾ ಪುಷ್ಕರ ನಡೆಯಲಿದೆ.
ಪ್ರತಿ 12 ವರ್ಷಕ್ಕೊಮ್ಮೆ ಕೃಷ್ಣೆ ಹಾಗೂ ಕೃಷ್ಣಾ ನದಿಯ ಪುಷ್ಕರ ಕಾರ್ಯಕ್ರಮ ನಡೆಯುತ್ತದೆ. ಕೃಷ್ಣಾ ನದಿ ಹಾಗೂ ತುಂಗಭದ್ರಾ ನದಿಯ ಪುಷ್ಕರಗಳು ಬೇರೆ ಬೇರೆ ವರ್ಷ ನಡೆಯುತ್ತವೆ. ಈ ವರ್ಷ ತುಂಗಭದ್ರಾ ನದಿಯ ಪುಷ್ಕರ ನಡೆಯಲಿದೆ.
ಜೀವನದಿಯಾದ ತುಂಗಭದ್ರಾ ನದಿಯು ಹಲವರಿಗೆ ಜೀವನವನ್ನು ನೀಡಿದೆ. ಈ ನದಿಯನ್ನೇ ನಂಬಿಕೊಂಡ ಕೋಟ್ಯಾಂತರ ಜನರಿದ್ದಾರೆ. ತುಂಗಭದ್ರಾ ನದಿಯನ್ನು ಪೂಜಿಸುವ ವಿಶೇಷ ಕಾರ್ಯಕ್ರಮವಾದ ಪುಷ್ಕರ ಎಂಬ ಆಚರಣೆ ತೆಲುಗು ಭಾಷಿಗರು ಆಚರಿಸುತ್ತಾರೆ.
12 ವರ್ಷಕ್ಕೊಮ್ಮೆ ನದಿಯ ದಡದಲ್ಲಿ ಪುಣ್ಯ ಸ್ನಾನ ಮಾಡಿ ನದಿಯನ್ನು ಪೂಜಿಸುತ್ತಾರೆ. ಈ ಪದ್ದತಿ ಹಿಂದಿನ ತಲೆಮಾರಿನಿಂದಲೂ ನಡೆದುಕೊಂಡು ಬಂದಿದೆ ಎಂದು ಮಂತ್ರಾಲಯದ ಶ್ರೀ ಸುಭುದೇಂದ್ರ ತೀರ್ಥರು ಮಾಹಿತಿ ನೀಡಿದ್ದಾರೆ.
ಆಂಧ್ರ ಪ್ರದೇಶ ಸರಕಾರ ಪುಷ್ಕರಕ್ಕೆ 200ಕೋಟಿ ರೂಪಾಯಿ ಅನುದಾನ ನೀಡಲಿದೆ.
ಈ ವರ್ಷ ಕೊರೋನಾ ಇರುವ ಹಿನ್ನೆಲೆಯಲ್ಲಿ ಪುಷ್ಕರವನ್ನು ಎಚ್ಚರಿಕೆಯಿಂದ ಮಾಡಲಾಗುತ್ತಿದೆ. ಕೊರೋನಾ ನಿಯಮಾವಳಿಗಳನ್ನು ಪಾಲಿಸಿಕೊಂಡು ಪುಷ್ಕರ ಆಚರಿಸಲಾಗುವುದು,
ಪುಷ್ಕರದಲ್ಲಿ 60 ವರ್ಷ ಮೇಲ್ಪಟ್ಟವರು, 12 ವರ್ಷದೊಳಗಿನವರಿಗೆ ಅವಕಾಶವಿಲ್ಲ. ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಲಾಗುವುದು, ಪುಷ್ಕರ ಸಂದರ್ಭದಲ್ಲಿ ಪುಣ್ಯ ಸ್ನಾನಕ್ಕೆ ಸರದಿಯಂತೆ ಒಬ್ಬೊಬ್ಬರನ್ನೇ ಬಿಡಲಾಗುವುದು.
ಪುಷ್ಕರದಲ್ಲಿ ಪಾಲ್ಗೊಳ್ಳುವವರು ಕರ್ನೂಲ ಜಿಲ್ಲಾಡಳಿತ ನೀಡುವ ಇ- ಪಾಸ್ ಪಡೆಯಬೇಕಾಗಿದೆ ಎಂದು ತಿಳಿಸಿದ್ದಾರೆ.
ಪುಷ್ಕರಕ್ಕೆ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಆಹ್ವಾನಿಸಲಾಗಿದೆ. ಕೇಂದ್ರದ ಹಲವಾರು ಸಚಿವರು ಸಹ ಭಾಗಿಯಾಗಲಿದ್ದಾರೆ ಎಂದು ಮಂತ್ರಾಲಯದ ಶ್ರೀಗಳು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ