ಈ ವರ್ಷ ನವೆಂಬರ್ 20 ರಿಂದ ಡಿಸೆಂಬರ್ 1 ರವರೆಗೆ ತುಂಗಭದ್ರಾ ಪುಷ್ಕರ ನಡೆಯಲಿದೆ.
ಪ್ರತಿ 12 ವರ್ಷಕ್ಕೊಮ್ಮೆ ಕೃಷ್ಣೆ ಹಾಗೂ ಕೃಷ್ಣಾ ನದಿಯ ಪುಷ್ಕರ ಕಾರ್ಯಕ್ರಮ ನಡೆಯುತ್ತದೆ. ಕೃಷ್ಣಾ ನದಿ ಹಾಗೂ ತುಂಗಭದ್ರಾ ನದಿಯ ಪುಷ್ಕರಗಳು ಬೇರೆ ಬೇರೆ ವರ್ಷ ನಡೆಯುತ್ತವೆ. ಈ ವರ್ಷ ತುಂಗಭದ್ರಾ ನದಿಯ ಪುಷ್ಕರ ನಡೆಯಲಿದೆ.
ಜೀವನದಿಯಾದ ತುಂಗಭದ್ರಾ ನದಿಯು ಹಲವರಿಗೆ ಜೀವನವನ್ನು ನೀಡಿದೆ. ಈ ನದಿಯನ್ನೇ ನಂಬಿಕೊಂಡ ಕೋಟ್ಯಾಂತರ ಜನರಿದ್ದಾರೆ. ತುಂಗಭದ್ರಾ ನದಿಯನ್ನು ಪೂಜಿಸುವ ವಿಶೇಷ ಕಾರ್ಯಕ್ರಮವಾದ ಪುಷ್ಕರ ಎಂಬ ಆಚರಣೆ ತೆಲುಗು ಭಾಷಿಗರು ಆಚರಿಸುತ್ತಾರೆ.
12 ವರ್ಷಕ್ಕೊಮ್ಮೆ ನದಿಯ ದಡದಲ್ಲಿ ಪುಣ್ಯ ಸ್ನಾನ ಮಾಡಿ ನದಿಯನ್ನು ಪೂಜಿಸುತ್ತಾರೆ. ಈ ಪದ್ದತಿ ಹಿಂದಿನ ತಲೆಮಾರಿನಿಂದಲೂ ನಡೆದುಕೊಂಡು ಬಂದಿದೆ ಎಂದು ಮಂತ್ರಾಲಯದ ಶ್ರೀ ಸುಭುದೇಂದ್ರ ತೀರ್ಥರು ಮಾಹಿತಿ ನೀಡಿದ್ದಾರೆ.
ಆಂಧ್ರ ಪ್ರದೇಶ ಸರಕಾರ ಪುಷ್ಕರಕ್ಕೆ 200ಕೋಟಿ ರೂಪಾಯಿ ಅನುದಾನ ನೀಡಲಿದೆ.
ಈ ವರ್ಷ ಕೊರೋನಾ ಇರುವ ಹಿನ್ನೆಲೆಯಲ್ಲಿ ಪುಷ್ಕರವನ್ನು ಎಚ್ಚರಿಕೆಯಿಂದ ಮಾಡಲಾಗುತ್ತಿದೆ. ಕೊರೋನಾ ನಿಯಮಾವಳಿಗಳನ್ನು ಪಾಲಿಸಿಕೊಂಡು ಪುಷ್ಕರ ಆಚರಿಸಲಾಗುವುದು,
ಪುಷ್ಕರದಲ್ಲಿ 60 ವರ್ಷ ಮೇಲ್ಪಟ್ಟವರು, 12 ವರ್ಷದೊಳಗಿನವರಿಗೆ ಅವಕಾಶವಿಲ್ಲ. ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಲಾಗುವುದು, ಪುಷ್ಕರ ಸಂದರ್ಭದಲ್ಲಿ ಪುಣ್ಯ ಸ್ನಾನಕ್ಕೆ ಸರದಿಯಂತೆ ಒಬ್ಬೊಬ್ಬರನ್ನೇ ಬಿಡಲಾಗುವುದು.
ಪುಷ್ಕರದಲ್ಲಿ ಪಾಲ್ಗೊಳ್ಳುವವರು ಕರ್ನೂಲ ಜಿಲ್ಲಾಡಳಿತ ನೀಡುವ ಇ- ಪಾಸ್ ಪಡೆಯಬೇಕಾಗಿದೆ ಎಂದು ತಿಳಿಸಿದ್ದಾರೆ.
ಪುಷ್ಕರಕ್ಕೆ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಆಹ್ವಾನಿಸಲಾಗಿದೆ. ಕೇಂದ್ರದ ಹಲವಾರು ಸಚಿವರು ಸಹ ಭಾಗಿಯಾಗಲಿದ್ದಾರೆ ಎಂದು ಮಂತ್ರಾಲಯದ ಶ್ರೀಗಳು ತಿಳಿಸಿದ್ದಾರೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment