ಮಂಡ್ಯ ತಾಲೂಕಿನ ಬಿ.ಹೊಸೂರು ಗ್ರಾಮದ ಹೊರ ಹೊಲಯದಲ್ಲಿ ರುವ ಅಂಬೇಗಾಲು ಕೃಷ್ಣ ದೇವಾಲಯದ ಆವರಣದಲ್ಲಿ ಲಾಕ್ಡೌನ್ ನಿಯಮ ಮೀರಿ ಅದ್ದೂರಿ ಮದುವೆ ಕಾರ್ಯಕ್ರಮ.
ಮಂಡ್ಯ ತಹಶಿಲ್ದಾರ್ ದಾಳಿ ಮಾಡಿದಾಗ ಅವರ ಮೇಲೆ ಹಲ್ಲೆ ಯತ್ನ, ಅಸಭ್ಯ ವರ್ತನೆ ಮಾಡಿದ ಘಟನೆ ಜರುಗಿದೆ. ವಧು-ವರನ ಕುಟುಂಬಸ್ಥರಿಂದ ಅಧಿಕಾರಿಗಳ ಮೇಲೆ ಹಲ್ಲೆ ಯತ್ನ ನಡೆದಿದೆ.
ಗ್ರಾಪಂ ಸದಸ್ಯ ಮಹೇಶ್ ಎಂಬುವವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ಜನರು ಪಾಲ್ಗೊಂಡು ಅದ್ದೂರಿ ಮದುವೆ ಮಾಡುತ್ತಿದ್ದರು.
ಯಾವುದೇ ಅನುಮತಿ ಪಡೆಯದೆ ಲಾಕ್ಡೌನ್ ನಿಯಮ ಮೀರಿ ಈ ಮದುವೆ ಮಾಡಲಾಗುತ್ತಿತ್ತು.
ವಿಚಾರ ತಿಳಿದು ಅಧಿಕಾರಿಗಳು ದಾಳಿ ಮಾಡಿದರು.
ದಾಳಿ ನೇತೃತ್ವ ವಹಿಸಿದ್ದ ಮಂಡ್ಯ ತಹಶಿಲ್ದಾರ್ ಚಂದ್ರಶೇಖರ್ ಶಂಗಾಳಿ ಮದುವೆ ನಿಲ್ಲಿಸುವಂತೆ ಕುಟುಂಬಸ್ಥರಿಗೆ ಸೂಚನೆ ನೀಡಿದರೂ ಮಾತು ಕೇಳಲಿಲ್ಲ .
ಈ ವೇಳೆ ಅಧಿಕಾರಿಗಳು ಕುಟುಂಬಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವಾಗ್ವಾದ ನಡುವೆ ತಹಶಿಲ್ದಾರ್ ಚಂದ್ರಶೇಖರ್ ಶಂಗಾಳಿ ಮೇಲೆ ಹಲ್ಲೆ ಯತ್ನವೂ ನಡೆಯಿತು.
ಪೋಲಿಸರು 3 ಕಾರ್ಗಳನ್ನು ಸೀಜ್ ಮಾಡಿದ್ದಾರೆ. ಪ್ರಕೃತಿ ವಿಕೋಪ ತಡೆ ಕಾಯ್ದೆ, ಸಾಂಕ್ರಾಮಿಕ ರೋಗಗಳ ಕಾಯ್ದೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಕಾಯ್ದೆ ಅಡಿ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ