ತನ್ನ ಮದುವೆ ಅದ್ಧೂರಿಯಾಗಿ ನಡೆಯಬೇಕೆಂಬ ಕನಸು ಕಂಡಿದ್ದ ಯುವಕ ವಿಧಿಯಾಟ ಬೇರೆ ಆಗಿದ್ದರಿಂದ ಆಸ್ಪತ್ರೆ ಬೆಡ್ ನಿಂದಲೇ ಆತ ವಧುವಿಗೆ ತಾಳಿ ಕಟ್ಟುವ ಸ್ಥಿತಿ ಕೇರಳದ ತಿರುವನಂತಪುರಂ ಜಿಲ್ಲೆಯ ವೆಂಬಾಯಮ್ ನಲ್ಲಿ ಘಟನೆ ನಡೆದಿದೆ.
ಮನೋಜ್ ಹಾಗೂ ರೇವತಿ ಆಸ್ಪತ್ರೆಯಲ್ಲಿ ಮದುವೆಯಾಗುವ ಮೂಲಕ ಸದ್ಯ ಭಾರಿ ಸುದ್ದಿಯಲ್ಲಿ ಇದ್ದಾರೆ.
ಮನೋಜ್ ಹಾಗೂ ರೇವತಿಯ ಮದುವೆ ಫೆಬ್ರವರಿ 4ರಂದು ನಡೆಯಬೇಕಿತ್ತು. ಮನೋಜ್ ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾದ ಅನಿವಾರ್ಯ ಬಂತು.
ಈ ಹಿನ್ನೆಲೆಯಲ್ಲಿ ಮದುವೆಯ ಕನಸು ಕಂಡಿದ್ದ ಮನೋಜ್ ಆಸ್ಪತ್ರೆಗೆ ದಾಖಲಾದರು. ಈ ಮೂಲಕ ಎರಡು ಕುಟುಂಬಗಳ ಅದ್ಧೂರಿ ಮದುವೆಗೆ ತಣ್ಣೀರೆರಚಿದಂತಾಗಿತ್ತು.
ಈ ನಿರಾಸೆಯನ್ನು ಬದಿಗೊತ್ತಿ ಎರಡು ಕುಟುಂಬಗಳು ಕೂಡ ತಮ್ಮ ಮಕ್ಕಳಿಗೆ ಆಸ್ಪತ್ರೆಯಲ್ಲಿಯೇ ಮದುವೆ ಮಾಡಲು ನಿರ್ಧರಿಸಿದರು.
ಅಂತೆಯೇ ಫೆಬ್ರವರಿ 6ರಂದು ಖಾಸಗಿ ಆಸ್ಪತ್ರೆಯಲ್ಲಿಯೇ ವಿಶೇಷವಾಗಿ ವಿವಾಹ ಸಮಾರಂಭ ನೆರವೇರಿಸಿದ್ದಾರೆ. ಇಬ್ಬರ ಕುಟುಂಬ ಹಾಗೂ ಆಸ್ಪತ್ರೆಯ ಸಿಬ್ಬಂದಿ ಸಮ್ಮುಖದಲ್ಲಿ ಮನೋಜ್ ಹಾಗೂ ರೇವರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಆಸ್ಪತ್ರೆಯ ರೂಂನ್ನು ಮದುವೆ ಮಂಟಪವಾಗಿ ಮಾರ್ಪಾಡು ಮಾಡಿ ವಧು ಹಾಗೂ ವರರ ಮದುವೆ ನೆರವೇರಿಸಲಾಗಿದೆ. ಬೆಡ್ ನಲ್ಲಿ ಮಲಗಿದ್ದಲ್ಲಿದ್ದಂದ್ಲೇ ಮನೋಜ್ ರೇವತಿಗೆ ತಾಳಿ ಕಟ್ಟಿದರು.
ವಿವಾಹ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಸಿಇಓ ಡಾ. ಪಿ ಅಶೋಕ್, ಡಾ. ಲೈಜಾ ಮತ್ತು ಸಿಬ್ಬಂದಿ ಭಾಗಿಯಾಗಿದ್ದರು.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment