Main News

ತಮ್ನಾರ್ ವಿದ್ಯುತ್ ಯೋಜನೆಗೆ ಕರ್ನಾಟಕ-ಗೋವಾ ಪರಿಸರ ಪ್ರೇಮಿಗಳ. ಭಾರಿ ವಿರೋಧ

ಧಾರವಾಡ, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಮೂಲಕ ಗೋವಾಕ್ಕೆ ಹಾದು ಹೋಗುವ ತಮ್ನಾರ್ ವಿದ್ಯುತ್ ಮಾರ್ಗಕ್ಕೆ ಉಭಯ ರಾಜ್ಯಗಳ ಪರಿಸರ ಪ್ರೇಮಿಗಳು ಹಾಗೂ ನಾಗರೀಕರಿಂದ ಭಾರೀ ವಿರೋಧ ವ್ಯಕ್ತವಾಗಿದೆ.

ಛತ್ತೀಸ್ ಘಡದ ತಮ್ನಾರ್ ಶಕ್ತಿ ಸ್ಥಾವರದ ಮೂಲಕ ಧಾರವಾಡದ ನರೇಂದ್ರ ಗ್ರಾಮದ ಮಾರ್ಗವಾಗಿ ೪೦೦ ಕಿಲೋ ವ್ಯಾಟ್ ಸಾಮರ್ಥ್ಯದ ಲೈನ್ ಗೋವಾಗೆ ಹೋಗುವ ದಾರಿಯಲ್ಲಿ ಇರುವ ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಅರಣ್ಯ, ಬೆಳಗಾವಿಯ ತವಭೀಮನಗಡ ಸಂರಕ್ಷಿತ ಅರಣ್ಯ ಹಾಗೂ ಧಾರವಾಡದ ಚಿಕ್ಕ ಪುಟ್ಟ ಅರಣ್ಯ ಪ್ರದೇಶಗಳ ಒಟ್ಟು ೧೭೦ ಹೆಕ್ಟೇರ್ ಪ್ರದೇಶ ನಾಶವಾಗಲಿದೆ. ಇದರಿಂದ ಪದರಕೃತಿಯ ಅಸಮತೋಲನ ಉಂಟಾಗುವುದರಿಂದ ಈ ಯೋಜನೆಗೆ ಪರಿಸರ ಪ್ರೇಮಿಗಳು ಹಾಗೂ ನಾಗರೀಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಗೋವಾದಲ್ಲಿನ ಮೋಲೆಮ್ ಗ್ರಾಮದ ನಿವಾಸಿಗಳೂ ಸಹ ಸ್ವತಃ ಅವರ ಸರ್ಕಾರ ಅನುಮೋದಿಸಿರುವ ಈ ಯೋಜನೆಯನ್ನು ವಿರೋಧಿಸಿದ್ದಾರೆ. ತಮ್ನಾರ್ ವಿದ್ಯುತ್ ಮಾರ್ಗವು ಭಗವಾನ್ ಮಹಾವೀರ ಅಭಯಾರಣ್ಯ ಮತ್ತು ಮೋಲೆಮ್ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಹಲವು ಪ್ರದೇಶಗಳಷ್ಟು ಅರಣ್ಯ ನಾಶ ಮಾಡುವದರಿಂದ ಟ್ರಾವೆಲ್ ಅಂಡ್ ಟೂರಿಸಂ ಅಸೋಸಿಯೇಷನ್ ಆಫ್ ಗೋವಾ ಈ ಯೋಜನೆಯನ್ನು ವಿರೋದಿಸಿತ್ತು. ಈಗ ಮೋಲೆಮ್ ನ ಸಾರ್ವಜನಿಕರು, ಯೋಜನೆಯ ಸಾಧಕ-ಬಾಧಕಗಳ ಕುರಿತು ಏರ್ಪಡಿಸಿದ್ದ ಸಭೆಯೊಂದಕ್ಕೆ ಆಗಮಿಸಿದ್ದ ಪಿಡಬ್ಲ್ಯುಡಿ ಸಚಿವ ದೀಪಕ್ ಪಾವಸ್ಕಾರ್ ಹಾಗೂ ವಿದ್ಯುತ್ ಖಾತೆ ಸಚಿವ ನೀಲೇಶ ಕಬ್ರಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಚಿವರು ಅಲ್ಲಿನ ೧೦೦ ಜನ ಯುವಕರಿಗೆ ಉದ್ಯೋಗ ನೀಡುವುದಾಗಿ ಮನವೊಲಿಸಲು ಪ್ರಯತ್ನಿಸಿದರು. ಹಾಗೆಯೇ ಯೋಜನೆಗೆ ಸಂಬಂಧಪಟ್ಟಂತೆ ಅದರ ಉಪಯೋಗಗಳನ್ನೂ ವಿವರಿಸಲು ಪ್ರಯತ್ನಿಸಿದ್ದಾರೆ‌. ಸಚಿವರ ಸಮರ್ಥನೆಗಳಿಂದ ತೃಪ್ತರಾಗದ ಸಾರ್ವಜನಿಕರು ಸಚಿವರಿಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಸಂದರ್ಭ ವಿಷಮಕ್ಕೆ ತಿರುಗುತ್ತಿರುವುದನ್ನು ಮನಗಂಡ ಪೋಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ‌.

ಕರ್ನಾಟಕವೂ ಸಹ ಈ ಯೋಜನೆಗೆ ಅನುಮತಿ ನೀಡದೇ ಪರಿಸರ ರಕ್ಷಣೆಗೆ ಮುಂದಾಗಬೇಕಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024