ಈ ಶತಮಾನದಲ್ಲಿ ವಿಶ್ವದಾದ್ಯಂತ ಮಾನವ ಜನಾಂಗವನ್ನು ತೀವ್ರರೀತಿಯಲ್ಲಿ ಕಾಡಿತ್ತಿರುವ ಕೋವಿಡ್-19ಕ್ಕೆ ಲಸಿಕೆ ಕಂಡು ಹಿಡಿಯುವಲ್ಲಿ ವಿಶ್ವದ ಪ್ರಮುಖ ದೇಶಗಳಲ್ಲಿ ಪ್ರಯೋಗಗಳು ನಡೆಯುತ್ತಿದ್ದು ಯಶಸ್ಸಿನ ಹಂತಕ್ಕೆ ಬರಲಾಗುತ್ತಿದೆ ಎಂದು ಸಿಹಿಸುದ್ದಿ ಪ್ರತಿದಿನ ಮಾಧ್ಯಮಗಳಲ್ಲಿ ಬರುತ್ತಿರುವ ಈ ಸಂದರ್ಭದಲ್ಲೇ ಶೀಘ್ರದಲ್ಲೇ ಲಸಿಕೆ ಲಭ್ಯವಾಗಲಿದೆ ಎಂದು ಮಾಹಿತಿಯೂ ಹೊರಬಿದ್ದಿದೆ.
ಪ್ರಥಮ ಹಂತದಲ್ಲಿ ಕರೋನ ಲಸಿಕೆಯನ್ನು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸಂಗ್ರಹಸಿಡುವ ಬಗ್ಗೆಈಗಾಗಲೇ ಸಿದ್ಧತೆ ನಡೆಯುತ್ತಿದೆ. ಸಿಲಿಕಾನ್ ಸಿಟಿಯ ಟೌನ್ಹಾಲ್ ಸಮೀಪದ ದಾಸಪ್ಪ ಆಸ್ಪತ್ರೆಯಲ್ಲಿ ಈ ಮಹತ್ವದ ಲಸಿಕೆ ಸಂಗ್ರಹಿಸಿಡಲು ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ಬೃಹತ್ ಬೆಂಗಳೂರು ಮಹಾ ನಗರಪಾಲಕೆ ಮುಂದಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಆಸ್ಪತ್ರೆ ಸುತ್ತ ಸಿಸಿಟಿವಿ ಅಳವಡಿಸಲು ಬಿಬಿಎಂಪಿ ಕ್ರಮಕೈಗೊಂಡಿದೆ. ಲಸಿಕೆ ಸಾಗಿಸಲು ವಿಶೇಷ ವಾಹನ ಸೌಲಭ್ಯಕ್ಕೂ ಅಧಿಕಾರಿಳು ಸಜ್ಜಾಗಿದ್ದಾರೆ. ಈ ವೇಳೆ ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಲಸಿಕೆ ಸಂಗ್ರಹಿಸಿಡುವ ಪೆಟ್ಟಿಗಳ ಪರಿಶೀಲನೆ ಮಾಡಿದರು.
ಈಗಾಗಲೇ ಬಾಗಲಕೋಟೆಯಲ್ಲೂ ಲಸಿಕೆ ಸಂಗ್ರಹದ ಕೋಲ್ಡ್ ಸ್ಟೋರೇಜ್ ನಿರ್ಮಾಣವಾಗಿದ್ದು, ಅದು 55 ಲಕ್ಷ ವ್ಯಾಕ್ಸಿನ್ ಸಂಗ್ರಹಿಸಿಡುವ ಸಾಮಥ್ರ್ಯ ಹೊಂದಿದೆ. ಈ ಕೋಲ್ಟ್ ಸ್ಟೋರೇಜ್ ನಿಂದ ಕೊಪ್ಪಳ, ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ವ್ಯಾಕ್ಸಿನ್ ಹಂಚಿಕೆ ಮಾಡಬಹುದಾಗಿದೆ.
ಸರ್ಕಾರವಂತೂ ಲಸಿಕೆ ವಿತರಣೆಗೆ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದು, ಶ್ರೀರಾಮನಿಗೆ ಶಬರಿ ಕಾದಂತೆ, ಯಾವಾಗ ಲಸಿಕೆ ಬರುತ್ತದೋ ಎಂದು ಕಾಯುವಂತಾಗಿದೆ.
ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More
ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಸೋಮವಾರದವರೆಗೆ… Read More
ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
This website uses cookies.
Leave a Comment