2021 ರ ಮೇ ಎರಡನೇ ವಾರ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸಲು ಸಿದ್ದತೆ ನಡೆದಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಜಮಖಂಡಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುರೇಶ್ ಕುಮಾರ್, ಈಗಾಗಲೇ ಶೇಕಡಾ 30ರಷ್ಟು ಪಠ್ಯ ಕಡಿಮೆ ಮಾಡಲಾಗಿದೆ. ಮುಂದಿನ ತರಗತಿ ಕಲಿಕೆಗೆ ಕೊರತೆಯಾಗದಂತೆ ಪಠ್ಯವಿಷಯ ಕಡಿಮೆ ಮಾಡಿದ್ದೇವೆ. ಕೋವಿಡ್ ಕಾರಣದಿಂದ ಪರೀಕ್ಷೆಗೆ ಶಾಲಾ ಮಕ್ಕಳ ಹಾಜರಾತಿ ಕಡ್ಡಾಯವಲ್ಲ ಎಂದು ತಿಳಿಸಿದರು.
ಪರೀಕ್ಷೆ ಯಾವ ರೀತಿ ನಡೆಸಬೇಕು ಅಂತ ಎಸ್ಎಸ್ಎಲ್ಸಿ ಮತ್ತು ಪಿಯು ಮಂಡಳಿಗಳೇ ನಿರ್ಧರಿಸಲಿವೆ ಎಂದು ಹೇಳಿದರು.