November 10, 2025

Newsnap Kannada

The World at your finger tips!

WhatsApp Image 2023 04 23 at 4.57.16 PM

ಏನು ಕೆಲಸ ಮಾಡಿದ್ದೀರಿ ಎಂದ ಪ್ರಶ್ನೆ ಮಾಡಿದ ಯುವಕನಿಗೆ ಎಂ ಬಿ ಪಾಟೀಲ್ ಕಪಾಳ ಮೋಕ್ಷ

Spread the love

ಕಾಂಗ್ರೆಸ್ ನ ಮುಖ್ಯಮಂತ್ರಿ ಆಕಾಂಕ್ಷಿ , ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಕೆಲಸ ಕೇಳಿದ್ದಕ್ಕೆ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ.

ಕಪಾಳಮೋಕ್ಷ ಮಾಡಿದ್ದ ಮಾಜಿ ಸಚಿವ ಮತ್ತು ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ. ಪಾಟೀಲ್.

ಈ ಕ್ಷೇತ್ರದಲ್ಲಿ ಸತತವಾಗಿ ಗೆದ್ದು ಬರುತ್ತಿರುವ ಎಂ.ಬಿ. ಪಾಟೀಲ್ ಅವರು ಯುವಕನ ಕೆನ್ನೆಗೆ ಬಾರಿಸಿದ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರದ ದೇವಾಪೂರ ಗ್ರಾಮದಲ್ಲಿ ನಡೆದಿದೆ.

ಬಬಲೇಶ್ವರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂ.ಬಿ. ಪಾಟೀಲ್ ಶನಿವಾರ ತಡರಾತ್ರಿ ಪ್ರಚಾರಕ್ಕೆ ಬಂದಿದ್ದರು. ಈ ವೇಳೆ ಬಬಲೇಶ್ವರ ಕ್ಷೇತ್ರದ ದೇವಾಪೂರ ಗ್ರಾಮದ ಯುವಕ ಹಣಮಂತ ತುಪ್ಪದ್ ಅವರಿಗೆ ಕಪಾಳ ಮೋಕ್ಷ ಮಾಡಿದರು.ಇದನ್ನು ಓದಿ –ಸಿದ್ಧಗಂಗಾ ಮಠದ ಉತ್ತರಾಧಿಕಾರಿ: ನಿರಂಜನ ಜಂಗಮಪಟ್ಟಾಧಿಕಾರ – ಶಿವ ಸಿದ್ದೇಶ್ವರ ಯೋಗ ಪಟ್ಟ

ಬಬಲೇಶ್ವರ ಕ್ಷೇತ್ರದ ದೇವಾಪೂರ ಗ್ರಾಮದ ಯುವಕ ಹಣಮಂತ ಅವರು, ಚುನಾವಣೆ ಬರುತ್ತಿದ್ದಂತೆ 5 ವರ್ಷಗಳ ನಂತರ ಗ್ರಾಮಕ್ಕೆ ಆಗಮಿಸಿದ್ದೀರಿ. ನಮ್ಮ ಗ್ರಾಮದಲ್ಲಿ ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾನೆ. ಇದರಿಂದಾಗಿ ಕುಪಿತರಾದ ಮಾಜಿ ಸಚಿವ ಎಂ.ಬಿ. ಪಾಟೀಲ್ ತುಂಬಿದ ಸಭೆಯಲ್ಲೇ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ.

error: Content is protected !!