Mysuru

ಮೂರು ಜಿಲ್ಲೆಗಳಲ್ಲಿ ಮಾಧ್ಯಮ ಬಳಕೆ ಪ್ರಮಾಣ ಉತ್ತಮ

ರಾಜ್ಯದ ಆಯ್ದ15 ಜಿಲ್ಲೆಗಳಲ್ಲಿ ಯುಜಿಸಿ-ಯುಪಿಇ ಯೋಜನೆಯಡಿ ಮೈಸೂರು ವಿಶ್ವವಿದ್ಯಾಲಯವು ನಡೆಸಿದ “ಮಾಧ್ಯಮ ಮತ್ತು ಸಾಮಾಜಿಕ ಅಭಿವೃದ್ಧಿ-ಕರ್ನಾಟಕ ರಾಜ್ಯದಲ್ಲಿ ಒಂದು ಅಧ್ಯಯನ’ ವರದಿಯನ್ನು ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ಮೈಸೂರಿನಲ್ಲಿ ಬಿಡುಗಡೆ ಮಾಡಿದರು.


ಬೆಂಗಳೂರು ದಕ್ಷಿಣ, ದಾವಣಗೆರೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾಧ್ಯಮ ಬಳಕೆ ಪ್ರಮಾಣ ಇತರೆ ಜಿಲ್ಲೆಗಳಿಗಿಂತ ಉತ್ತಮವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಧ್ಯಯನ ನಡೆಸಿದ ಎಲ್ಲ ಜಿಲ್ಲೆಗಳಲ್ಲಿ ಟಿವಿ ಬಳಕೆ ಅತಿ ಹೆಚ್ಚಿದೆ. ಪತ್ರಿಕೆಗಳ ಬಳಕೆ ಸಾಧಾರಣ ಮಟ್ಟದಲ್ಲಿರುವುದು ತಿಳಿದುಬಂದಿದೆ. ಶಿಕ್ಷಣ ಮತ್ತು ಸಾಕ್ಷರತೆಯ ಸುಧಾರಿತ ಕ್ರಮದಿಂದಾಗಿ ಪತ್ರಿಕೆಗಳ ಓದುಗರ ಸಂಖ್ಯೆ ಏರಿಕೆಯಾಗಿದೆ.


10 ವರ್ಷಗಳ ಅವಧಿಯಲ್ಲಿ ಕನ್ನಡ ದಿನ ಪತ್ರಿಕೆಗಳ ಓದುಗರ ಸಂಖ್ಯೆ ಶೇ. 7.29 ರಷ್ಟು ಹೆಚ್ಚಳವಾಗಿದ್ದು, ದಿನಪತ್ರಿಕೆಗಳ ಒಟ್ಟಾರೆ ಪ್ರಸರಣದ ಪ್ರಮಾಣದಲ್ಲೂ ಏರಿಕೆಯಾಗಿರುವ ವಿಷಯ ವರದಿಯಲ್ಲಿದೆ.
ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ದಾವಣಗೆರೆ, ಬೆಂಗಳೂರು ನಗರ, ಬಳ್ಳಾರಿ, ಬೀದರ್, ಯಾದಗಿರಿ, ಉತ್ತರ ಕನ್ನಡ, ಕೊಪ್ಪಳ, ಗದಗ, ರಾಯಚೂರು ಜಿಲ್ಲೆಗಳನ್ನು ಅಧ್ಯಯನಕ್ಕೆ ಆರಿಸಿಕೊಳ್ಳಲಾಗಿತ್ತು.

2010 ರಿಂದ 2020 ರ ತನಕ ಈ 15 ಜಿಲ್ಲೆಗಳಲ್ಲಿ ನಡಸಿದ ಸಾಮಾಜಿಕ ಅಭಿವೃದ್ಧಿಯ ಸ್ಥಿತಿಗತಿ ಕುರಿತು ದೊರೆತ ಸಂಶೋಧನೆಗಳನ್ನು 15 ಸಂಪುಟಗಳಲ್ಲಿ ಪ್ರಕಟಪಡಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಮುಸ್ಲಿಂ ಮಕ್ಕಳ ಶಾಲಾ ದಾಖಲಾತಿಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೆ ಮುಸ್ಲಿಂ ಸಮುದಾಯದ ಮೂರನೇ ಒಂದು ಭಾಗವು ಈಗಲೂ ಅನಕ್ಷರಸ್ಥರಾಗಿಯೇ ಇದೆ ಎಂದು ವರದಿ ಹೇಳಿದೆ.


ತುಮಕೂರು ವಿವಿ ಕುಲಪತಿ ಪ್ರೊ. ವೈ.ಎಸ್. ಸಿದ್ದೇಗೌಡ, ಪ್ರೊ.ಮುಜಾಫರ್ ಅಸಾದಿ, ಪ್ರೊ. ಎನ್. ಉಷಾರಾಣಿ ಅವರನ್ನೊಳಗೊಂಡ ತಂಡ ಈ ವರದಿ ಸಿದ್ಧಪಡಿಸಿದೆ.

Team Newsnap
Leave a Comment
Share
Published by
Team Newsnap

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024