ಸವಾಲುಗಳ ನಡುವೆ ಮಾಧ್ಯಮ ಸಾಗುತ್ತಿದೆ. ಹಾಗೆ ಪತ್ರಕರ್ತರ ಜವಾಬ್ದಾರಿ ಇನ್ನೂ ಹೆಚ್ಚಾಗಿದೆ ಎಂದು ವಾರ್ತಾ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಎಚ್.ಬಿ.ದಿನೇಶ್ ಹೇಳಿದ್ದಾರೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರಳವಾಗಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ಒಂದು ಕಾಲಘಟ್ಟದ ಮಾಧ್ಯಮ ಈಗ ಬಹಳಷ್ಟು ಬದಲಾಗಿದೆ. ಪತ್ರಕರ್ತರು ಕೂಡ ಹೊಸ ನೈಪುಣ್ಯತೆಗೆ ತೆರೆದುಕೊಳ್ಳಬೇಕಿದೆ ಎಂದರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮಾಡುತ್ತಿರುವ ಕೆಲಸ ಶ್ಲಾಘನೀಯ. ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರ ನೆರವಿಗೆ ಗಟ್ಟಿಯಾಗಿ ನಿಂತು ಪರಿಹಾರ ಕೊಡಿಸಿದ್ದು ದಾಖಲೆ ಕೆಲಸ. ಅದಕ್ಕಾಗಿ ಶಿವಾನಂದ ತಗಡೂರು ಅಭಿನಂದನಾರ್ಹರು ಎಂದರು.
ಈ ಸಂಜೆ ಸಂಪಾದಕರಾದ ಟಿ.ವೆಂಕಟೇಶ್ ಅವರು ಮಾತನಾಡಿ, ಸದಾ ಸಮಾಜಮುಖಿಯಾಗಿ ಪತ್ರಕರ್ತರು ತೊಡಗಿಸಿಕೊಳ್ಳಬೇಕು. ಕೆಯುಡಬ್ಲ್ಯೂಜೆ ಮಾಡುತ್ತಿರುವ ಕೆಲಸಗಳನ್ನು ಹತ್ತಿರದಿಂದ ಗಮನಿಸಿದ್ದು ನಮ್ಮೆಲ್ಲರಿಗೂ ಹೆಮ್ಮೆಯಾಗುವ ರೀತಿಯಲ್ಲಿ ಕೆಲಸ ಮಾಡುತ್ತಿರುವುದು ಪ್ರಶಂಸನೀಯ ಎಂದರು
ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಅವರು ಮಾತನಾಡಿ, ಪತ್ರಕರ್ತರು ಎಂದು ತಮ್ಮ ಹೆಗಲ ಮೇಲಿರುವ ಹೊಣೆಗಾರಿಕೆ ಮರೆಯದೆ, ವೃತ್ತಿ ಬದ್ಧತೆ ಕಾಪಾಡಿಕೊಂಡು ಬರಬೇಕು ಎಂದು ಕರೆ ನೀಡಿದರು.
ಕೆಯುಡಬ್ಲ್ಯೂಜೆ ಅಧ್ಯಕ್ಷ
ಶಿವಾನಂದ ತಗಡೂರು ಮಾತನಾಡಿ, ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ
ಕಲಬುರಗಿಗೆ ಬರಲಾಗದ ಕಾರಣ ಇಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದರು.
ಈ ಸಂಜೆ ಸಂಪಾದಕರಾದ ವೆಂಕಟೇಶ್ ಅವರು ತಮ್ಮ ಸಂಸ್ಥೆ ಅಭಿಮಾನಿ ಪ್ರಕಾಶನ ಹೆಸರಿನಲ್ಲಿ ಪ್ರಶಸ್ತಿಗಾಗಿ, ಒಂದು ಲಕ್ಷ ನೀಡಿದ್ದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು.
ನಾಡು ನುಡಿಗೆ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಮಾ.ರಾಮಮೂರ್ತಿ ಹೆಸರಿನಲ್ಲಿ ನೀಡುವ ಪ್ರಶಸ್ತಿಯನ್ನು
ಈ ಸಂಜೆ ಸಂಪಾದಕರಾದ ಟಿ.ವೆಂಕಟೇಶ್ ಅವರಿಗೆ, ನಾಡಿಗೇರ ಕೃಷ್ಣರಾಯ ಅವರ ಹೆಸರಿನ ಪ್ರಶಸ್ತಿಯನ್ನು ಸಮಾಜಮುಖಿ ಸಂಪಾದಕ ಚಂದ್ರಕಾಂತ ವಡ್ಡು ಅವರಿಗೆ, ಬೆಸ್ಟ್ ಫೋಟೋಗ್ರಾಫರ್ ಪ್ರಶಸ್ತಿಯನ್ನು ವಿಶ್ವನಾಥ್ ಸುವರ್ಣ ಅವರಿಗೆ ಪ್ರದಾನ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಹಂಪಿ ವಿವಿ ಯಿಂದ ಡಾಕ್ಟರೇಟ್ ಪದವಿ ಪಡೆದ ಪ್ರಜಾವಾಣಿ ನಿಕಟಪೂರ್ವ ಸಂಪಾದಕರಾದ ಪದ್ಮರಾಜ ದಂಡಾವತಿ ಅವರನ್ನು ಗೌರವಿಸಲಾಯಿತು.
ಪ್ರೊಫೆಸರ್ ಚಂದ್ರಶೇಖರ ಪಾಟೀಲ (ಚಂಪ) ಅವರಿಗೆ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಮತ್ತಿಕೆರೆ ಜಯರಾಂ, ಕಾರ್ಯದರ್ಶಿ ಬಂಗ್ಲೆ ಮಲ್ಲಿಕಾರ್ಜುನ, ಖಜಾಂಚಿ ಡಾ.ಉಮೇಶ್ವರ್, ಬೆಂಗಳೂರು ನಗರ ಘಟಕ ಅಧ್ಯಕ್ಷ ಸೋಮಶೇಖರ ಗಾಂಧಿ, ಪ್ರಧಾನ ಕಾರ್ಯದರ್ಶಿ ದೇವರಾಜ್ ಮತ್ತಿತರರು ಹಾಜರಿದ್ದರು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment