ಚಿಕ್ಕಬಳ್ಳಾಪುರದ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಮಧುಸೂದನಸಾಯಿ ಖಾಸಗಿ ಮೆಡಿಕಲ್ ಕಾಲೇಜು ಲೋಕಾರ್ಪಣೆ ಮಾಡಿ ಮಾತನಾಡಿದ ಮೋದಿ ಅವರು, ಬಡವರನ್ನು ವೋಟ್ ಬ್ಯಾಂಕ್ ಎಂದು ಪರಿಗಣಸಿದ್ದ ದೇಶದ ಪರಿಸ್ಥಿತಿಯನ್ನು ಬಿಜೆಪಿ ಸರ್ಕಾರ ಬದಲಾಯಿಸಿದೆ.
ಬಡವರ ಮಕ್ಕಳು ಕನ್ನಡದಲ್ಲಿ ವೈದ್ಯಕೀಯ ಓದುವಂತಹ ಸೌಲಭ್ಯಗಳನ್ನು ನಾವು ಕಲ್ಪಿಸಿದ್ದೇವೆ. ಕನ್ನಡ ಮಾತ್ರವಲ್ಲದೆ, ಅನೇಕ ಪ್ರಾಂತೀಯ ಭಾಷೆಗಳಲ್ಲಿ ಮಕ್ಕಳು ಇಂದು ವೈದ್ಯಕೀಯ ವಿಜ್ಞಾನ ಓದುವಂತೆ ನಾವು ಹೊಸ ವ್ಯವಸ್ಥೆಯನ್ನು ಸದ್ಯದಲ್ಲೇ ಎಲ್ಲಾ ಕಡೆಗೂ ತರಲಿದ್ದೇವೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮಸ್ಥಳವಾಗಿದೆ. ಇಂತಹ ಜನ್ಮಭೂಮಿಗೆ ಬಂದಿದ್ದು ನನ್ನ ಪುಣ್ಯ. ಸತ್ಯಸಾಯಿ ಆಶ್ರಮದಿಂದ ಶೈಕ್ಷಣಿಕ, ಸಾಮಾಜಿಕ, ವೈದ್ಯಕೀಯ ಸೇವೆ ನಡೆಯುತ್ತಿದೆ. 2014ಕ್ಕಿಂತ ಮೊದಲು 300ಕ್ಕಿಂತ ಕಡಿಮೆ ಮೆಡಿಕಲ್ ಕಾಲೇಜುಗಳಿದ್ದವು. ಇಂದು ದೇಶದಲ್ಲಿ 650ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಕರ್ನಾಟಕದಲ್ಲೇ ಸುಮಾರು 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು ಇವೆ ಎಂದರು.
ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿ ಆಗುತ್ತಿದೆ. ಬಡವರ ಅಭಿವೃದ್ಧಿಯೇ ಬಿಜೆಪಿಯ ಗುರಿಯಾಗಿದೆ. ಬಿಜೆಪಿಯವರ ತೊಂದರೆಯನ್ನು ಬಿಜೆಪಿ ಅರಿತು ಅದಕ್ಕೆ ಪರಿಹಾರವನ್ನು ಕಂಡುಹಿಡಿದಿದೆ. ಆಯುಷ್ಮಾನ ಭಾರತ್ ಯೋಜನೆಯಿಂದ ಬಡ ರೋಗಿಗಳಿಗೆ ಅನುಕೂಲವಾಗಿದೆ. ಕರ್ನಾಟಕದ ಲಕ್ಷಾಂತರ ರೋಗಿಗಳಿಗೆ ಯೋಜನೆಯಿಂದ ಅನುಕೂಲವಾಗಿದೆ. ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.
ಇದನ್ನು ಓದಿ –ವೈರಮುಡಿ ಉತ್ಸವದ ಸಿದ್ದತೆ : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
ಅಕ್ಷಯ ತೃತೀಯ ಹಿಂದುಗಳಿಗೆ ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗಿದೆ, ಅಕ್ಷಯ ಎಂದರೆ ಶಾಶ್ವತ ಎಂದರ್ಥ! ಸ್ನೇಹಾ ಆನಂದ್ 🌻 ಈ… Read More
ಮಡಿಕೇರಿ :ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಅಮಾನುಷ ಕೃತ್ಯ ನಡೆದಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಭೀಕರ ಹತ್ಯೆ ನಡೆದಿದೆ. ಮೀನಾ… Read More
ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More
ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಸೋಮವಾರದವರೆಗೆ… Read More
ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
This website uses cookies.
Leave a Comment