ಬೆಂಗಳೂರು:
ಸರ್ಕಾರಿ ವೈದ್ಯರಾಗಿದ್ದರೂ ಓಪಿಡಿ, ಮಾತ್ರೆ ,ಕೊನೆಗೆ ಸೂಜಿ ಚುಚ್ಚಲೂ ದುಡ್ಡು ಎಂಬಂತೆ ಲಂಚಬಾಕ ತನ ಪ್ರದರ್ಶನ ಮಾಡಿದ ಮೈಸೂರಿನ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕೋಮಲಾ ಅಮಾನತು ಗೊಳಿಸಲಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಈ ಆದೇಶದಲ್ಲಿ ಡಾ|| ಕೋಮಲ ಕೆ.ಪಿ., ವೈದ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಂತಿನಗರ, ಮೈಸೂರು, ಮೈಸೂರು ಜಿಲ್ಲೆ ಇವರು ರೋಗಿಗಳಿಗೆ ಚಿಕಿತ್ಸೆ ಹಾಗೂ ಔಷಧಿಗಳನ್ನು ನೀಡಲು ಹಣ ಪಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುತ್ತದೆ ಎಂದು ತಿಳಿಸಿದ್ದಾರೆ.
ವೈದ್ಯರು ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳಿಂದ ಹಣ ಪಡೆದಿರುವ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ವರದಿಯನ್ನು ಪರಿಶೀಲಿಸಿ ಸರ್ಕಾರದಿಂದ ಸಾರ್ವಜನಿಕರಿಗೆ ಉಚಿತವಾಗಿ ಔಷಧಿ ಮತ್ತು ಪರಿಕರಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಎ.ಬಿ.ಎ.ಆರ್.ಕೆ ಅಡಿ ಸಾಕಷ್ಟು ಸೌಲಭ್ಯಗಳನ್ನು ಒದಗಿಸಿದ್ದರೂ ಸಹ ವೈದ್ಯರು ಚಿಕಿತ್ಸೆಗೆ ಬರುವ ರೋಗಿಗಳಿಂದ ಹಣ ಪಡೆಯುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಮೈಸೂರು ಇವರು ವರದಿಯನ್ನು ಸಲ್ಲಿಸಿ, ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಿರುತ್ತಾರೆ ಎಂದಿದ್ದಾರೆ.
ವೈದ್ಯರು ಚಿಕಿತ್ಸೆ ನೀಡಲು ರೋಗಿಗಳಿಂದ ಹಣ ಪಡೆಯುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿರುತ್ತದೆ. ಇವರು ಭ್ರಷ್ಟಾಚಾರದಲ್ಲಿ ತೊಡಗಿರುವುದು ಇವರ ಈ ವರ್ತನೆಯಿಂದ ಸಾರ್ವಜನಿಕರಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಇಲಾಖೆಯ ಬಗ್ಗೆ ಖುಣಾತ್ಮಕ ಅಭಿಪ್ರಾಯವುಂಟಾಗಿರುತ್ತದೆ. ಇವರು ಸರ್ಕಾರಿ ವೈದ್ಯರಿಗೆ ತಕ್ಕದಲ್ಲದ ರೀತಿಯಲ್ಲಿ ವರ್ತಿಸಿ ದುರ್ನಡತೆ ಎಸಗಿರುತ್ತಾರೆ. ಇವರ ಕರ್ತವ್ಯಲೋಪ ಹಾಗೂ ದುರ್ನಡತೆಯನ್ನು ಗಂಭೀರವಾಗಿ ಪರಿಗಣಿಸಿ, ಇವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಇಲಾಖಾ ವಿಚಾರಣೆ ಬಾಕಿಯಿರಿಸಿ ಸೇವೆಯಿಂದ ಅಮಾನತ್ತುಗೊಳಿಸಲು ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
This website uses cookies.
Leave a Comment