ಮಂಡ್ಯದಲ್ಲಿ ಬಿಜೆಪಿಗೆ ಶಕ್ತಿ ಇಲ್ಲ. ಕಳೆದ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದಲ್ಲೂ ಜೆಡಿಎಸ್ ಜಯಭೇರಿ ಭಾರಿಸಿತ್ತು.
ಜೆಡಿಎಸ್, ಕಾಂಗ್ರೆಸ್ನ ಭದ್ರಕೋಟೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕಮಲ ಅರಳುವುದು ಕಷ್ಟ. ಆದರೆ ಈ ಬಾರಿ ಹೇಗಾದರೂ ಮಾಡಿ ಕಮಲ ಅರಳಿಸಲೇಬೇಕೆಂದು ಬಿಜೆಪಿ ಹೈಕಮಾಂಡ್ ಪಣ ತೊಟ್ಟಿದೆ.
ಈ ಕಾರಣಕ್ಕೆ ಯುವ ನಾಯಕನ್ನು ಕರೆ ತರಲು ಬಿಜೆಪಿ ಮುಂದಾಗಿದೆ. ಯುವ ನಾಯಕ ಮಾತುಗಾರನಾಗಿರಬೇಕು ಮತ್ತು ರಾಜಕೀಯ ಗೊತ್ತಿರಬೇಕು. ಈ ಅರ್ಹತೆ ಇರುವ ವ್ಯಕ್ತಿಯನ್ನು ಹುಡುಕುತ್ತಿರುವ ಬಿಜೆಪಿ ನಾಯಕರ ಕಣ್ಣಿಗೆ ಅಭಿಷೇಕ್ ಅಂಬರೀಶ್ ಕಾಣಿಸಿದ್ದಾರೆ.
ಮಂಡ್ಯದಲ್ಲಿ ಬಿಜೆಪಿ ಸಂಘಟನೆಗೆ ಯುವ ನಾಯಕತ್ವ ಬರುತ್ತದೆ ಎಂದು ಸಿಎಂ ಹೇಳಿದ್ದರು. ಈ ಯುವ ನಾಯಕ ಯಾರು ಎಂದು ಹೇಳಿರಲಿಲ್ಲ. ಈಗ ಬಂದಿರುವ ಮಾಹಿತಿ ಪ್ರಕಾರ ಅಭಿಷೇಕ್ ಅವರನ್ನು ಬಿಜೆಪಿಗೆ ಸೆಳೆಯಲು ಮಾತುಕತೆ ನಡೆಯುತ್ತಿವೆ.
ಅಭಿಷೇಕ್ಗೂ ಮೊದಲು ಸುಮಲತಾ ಆಪ್ತ ಸಚ್ಚಿದಾನಂದ ಬಿಜೆಪಿ ಸೇರ್ಪಡೆಗೆ ಪ್ಲಾನ್ ಮಾಡಲಾಗಿದೆ. ಸಚ್ಚಿದಾನಂದ ಬಳಿಕ ಸುಮಲತಾ ಅವರನ್ನು ಪಕ್ಷಕ್ಕೆ ಕರೆತರುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಕೆಲ ದಿನಗಳ ಹಿಂದೆ ಮದುವೆ ಕಾರ್ಯಕ್ರಮದಲ್ಲಿ ಸಿಎಂ ಜೊತೆ ಸುಮಲತಾ, ಅಭಿಷೇಕ್ ಮಾತನಾಡುತ್ತಿರುವ ಫೋಟೋ ವೈರಲ್ ಆಗಿತ್ತು.
ಬಿಜೆಪಿಗೆ ಬರುವ ಬಗ್ಗೆ ಸುಮಲತಾ ಅಂಬರೀಶ್ ಮತ್ತು ಅಭಿಷೇಕ್ ಇಲ್ಲಿಯವರೆಗೂ ಎಲ್ಲೂ ಅಧಿಕೃತವಾಗಿ ತಿಳಿಸಿಲ್ಲ. ಸುಮಲತಾ ಜನರ ಜೊತೆ ಚರ್ಚೆ ಮಾಡಿ ನಿರ್ಧಾರ ತಿಳಿಸುತ್ತೇನೆ ಎಂದಿದ್ದಾರೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment