Trending

ಮೆಹಂದಿ ಸಂಭ್ರಮದಲ್ಲಿ ನಟಿ ಕಾಜಲ್ ಅಗರ್ವಾಲ್‌!

ಮುಂಬೈನಲ್ಲಿ ಶುಕ್ರವಾರ (ಅ.30) ಕಾಜಲ್‌ ಅಗರ್ವಾಲ್ ಹಸೆಮಣೆ ಏರಲಿದ್ದಾರೆ.

ಅದಕ್ಕೂ ಮುನ್ನ  ಮೆಹಂದಿ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಆ ಸಂಭ್ರಮದ ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಕಾಜಲ್‌ ಹಂಚಿಕೊಂಡಿದ್ದಾರೆ.

ಬಹುಕಾಲದ ಗೆಳೆಯ ಗೌತಮ್‌ ಕಿಚಲು ಜೊತೆ ಕಾಜಲ್‌ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಎರಡೂ ಕೈಗಳಿಗೆ ಮದರಂಗಿ ಹಾಕಿಕೊಂಡಿರುವ ಕಾಜಲ್‌ ಖುಷಿ ಖುಷಿಯಾಗಿ ಕ್ಯಾಮರಾಗೆ ಪೋಸ್‌ ನೀಡಿದ್ದಾರೆ. ಸಂಭ್ರಮದ ನಡುವೆ ಅಭಿಮಾನಿಗಳಿಗಾಗಿ ಫೋಟೋ ಶೇರ್‌ ಮಾಡಿಕೊಂಡಿದ್ದಾರೆ.

ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿರುವಾಗಲೇ ಬಾಳಬಂಧನಕ್ಕೆ ಒಳಗಾಗಲು ಕಾಜಲ್‌ ನಿರ್ಧರಿಸಿರುವುದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ. ಉದ್ಯಮಿ ಗೌತಮ್‌ ಕಿಚಲು ಜೊತೆ ಅವರು ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಸುದ್ದಿ ಬಹಳ ದಿನಗಳಿಂದಲೂ ಹರಿದಾಡುತ್ತಿತ್ತಾದರೂ ಅದಕ್ಕೆ ಕಾಜಲ್‌ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ ಕೆಲವೇ ದಿನಗಳ ಹಿಂದೆ ಅವರು ತಮ್ಮ ಮದುವೆ ಸುದ್ದಿಯನ್ನು ಬಹಿರಂಗಪಡಿಸಿದರು. ಮದುವೆ ನಂತರವೂ ಚಿತ್ರರಂಗದಲ್ಲಿ ಸಕ್ರಿಯವಾಗಿರುವುದಾಗಿ ಅವರು ಭರವಸೆ ನೀಡಿದ್ದಾರೆ.

‘ಗೌತಮ್‌ ಕಿಚಲು ಜೊತೆ ಮದುವೆ ಆಗುತ್ತಿದ್ದೇನೆ ಎಂದು ತಿಳಿಸಲು ನನಗೆ ತುಂಬಾ ಸಂತೋಷ ಆಗುತ್ತಿದೆ. ಅ.30 ರಂದು ನಮ್ಮ ಮದುವೆ ಮುಂಬೈನಲ್ಲಿ ನೆರವೇರಲಿದೆ. ಕುಟುಂಬದ ಕೆಲವೇ ಸದಸ್ಯರು ಈ ಸಮಾರಂಭದಲ್ಲಿ ಭಾಗಿ ಆಗಲಿದ್ದಾರೆ. ಕೊರೊನಾದಿಂದಾಗಿ ನಮ್ಮ ಸಂಭ್ರಮ ಚೂರು ಮಂಕಾಗಿದೆ. ಆದರೂ ಹೊಸ ಬದುಕು ಆರಂಭಿಸಲು ನಾವು ಥ್ರಿಲ್‌ ಆಗಿದ್ದೇವೆ. ನೀವೆಲ್ಲರೂ ನಮ್ಮನ್ನು ಉತ್ಸಾಹದಿಂದ ಹುರಿದುಂಬಿಸುತ್ತೀರಿ ಎಂಬುದು ತಿಳಿದಿದೆ. ಇಷ್ಟು ವರ್ಷಗಳ ಕಾಲ ನನಗೆ ನೀವೆಲ್ಲ ತೋರಿದ ಪ್ರೀತಿಗೆ ಧನ್ಯವಾದಗಳು. ಈಗ ಹೊಸ ಪಯಣಕ್ಕೆ ನಾವು ನಿಮ್ಮ ಆಶೀರ್ವಾದ ಬಯಸುತ್ತಿದ್ದೇವೆ’ ಎಂದಿದ್ದಾರೆ ಕಾಜಲ್‌.

Team Newsnap
Leave a Comment
Share
Published by
Team Newsnap

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024