ಮೇಕೆದಾಟು ಆಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮತ್ತೆ ಮುಂದೂಡಿದೆ.
ಈ ಪ್ರಕರಣ ವಿಚಾರಣೆಯನ್ನು ಜನವರಿ 25ರಂದು ನಡೆಸಲಾಗುವುದು ಎಂದು ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ತ್ರಿ ಸದಸ್ಯ ಪೀಠ ಹೇಳಿದೆ.
ತಮಿಳುನಾಡು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ಇಂದು ನಡೆಯಬೇಕಿತ್ತು. ವಿಚಾರಣೆ ನಡೆಯಬೇಕಿದ್ದ ಅರ್ಜಿ, ಮುಲ್ಲೈ ಪೆರಿಯಾರ್ ಆಣೆಕಟ್ಟು ಸುರಕ್ಷತೆ ಸಂಬಂಧಿಸಿದ ಪ್ರಕರಣವೊಂದರ ಜೊತೆಗೆ ಸುಪ್ರೀಂಕೋರ್ಟ್ ಟ್ಯಾಗ್ ಮಾಡಿತ್ತು.
ಮಂಗಳವಾರ ವಿಚಾರಣೆ ವೇಳೆ ಕರ್ನಾಟಕ ಮತ್ತು ತಮಿಳುನಾಡು ಪರ ವಾದ ಮಂಡಿಸಿದ ವಕೀಲರು ಮುಲ್ಲೈ ಪೆರಿಯಾರ್ ಮತ್ತು ಮೇಕೆದಾಟಿಗೂ ಯಾವುದೇ ಸಂಬಂಧ ಇಲ್ಲ ಎರಡು ಅರ್ಜಿಗಳು ಪ್ರತ್ಯೇಕ ವಿಚಾರಣೆ ನಡೆಯಬೇಕು ಎಂದು ಮನವಿ ಮಾಡಿದರು.
ಮುಖ್ಯ ಅರ್ಜಿ ವಿಚಾರಣೆ ಹಂತದಲ್ಲಿರುವಾಗಲೇ ಎನ್ಜಿಟಿ ಆದೇಶವೊಂದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ತಮಿಳುನಾಡು ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಕಾಮಗಾರಿ ಪರಿಶೀಲನೆಗೆ ಸಮಿತಿ ರಚಿಸಿ ಚೆನ್ನೈ ಹಸಿರು ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿತ್ತು. ಅದಕ್ಕೂ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ಆದೇಶವನ್ನು ತಮಿಳುನಾಡು ಪ್ರಶ್ನಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು