Trending

ಕಾಂಗ್ರೆಸ್ ಕಾವೇರಿ, ಮೇಕೆದಾಟು ಹೋರಾಟ ಮಾಡಿ ತಮಿಳುನಾಡು-ಕರ್ನಾಟಕ ನಡುವೆ ಬಿರುಕು ತಂದಿತು: ಅಣ್ಣಾಮಲೈ

ತಮಿಳುನಾಡು ಮತ್ತು ಕರ್ನಾಟಕ ಬಾಂಧವ್ಯ ಚೆನ್ನಾಗಿರಲು ಹಲವು ವಿಚಾರಗಳಿವೆ. ಆದರೆ ಕಾಂಗ್ರೆಸ್
ಎರಡೂ ರಾಜ್ಯಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕೋಲಾರದಲ್ಲಿ ಭಾನುವಾರ ಹೇಳಿದರು.

ಕೋಲಾರದ ಕೆಜಿಎಫ್ ನಗರದಲ್ಲಿ ಭಾನುವಾರ ಬಿಜೆಪಿ ಸಮಾವೇಶ ಮಾಡುವ ಮೂಲಕ ತಮಿಳು ಮತಗಳನ್ನು ಸೆಳೆಯಲು ಬಿಜೆಪಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮಕ್ಕೂ ಮುನ್ನ ಅಣ್ಣಾಮಲೈ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಮೇಕೆದಾಟು ವಿಚಾರದಲ್ಲಿ ತಮ್ಮ ಅಭಿಪ್ರಾಯ ಏನು ಎಂಬುದಕ್ಕೆ ಪ್ರತಿಕ್ರಿಯೆ ನೀಡಿದರು.

ತಮಿಳುನಾಡು ಮತ್ತು ಕರ್ನಾಟಕದ ಬಾಂಧವ್ಯಕ್ಕಾಗಿ ಹಲವು ವಿಚಾರಗಳಿವೆ. ವ್ಯಾಪಾರ, ಕೃಷಿ ಸೇರಿದಂತೆ ಹಲವು ವಿಚಾರಗಳಲ್ಲಿ ಒಬ್ಬರಿಗೊಬ್ಬರು ಚೆನ್ನಾಗಿಯೇ ಇದ್ದೇವೆ.

ಇದನ್ನು ಓದಿ: ರಾಜ್ಯದ ಹವಾಮಾನ ವರದಿ (Weather Report)

ತಮಿಳುನಾಡಿನ ಎಷ್ಟೋ ಮಂದಿ ಬೆಂಗಳೂರಿನ ಐಟಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಬಾಂಧವ್ಯಕ್ಕೆ ಹಲವು ವಿಚಾರಗಳಿದ್ರು, ಕಾಂಗ್ರೆಸ್ ಜನರನ್ನು ಒಡೆಯುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕಾವೇರಿ ವಿಚಾರವಾಗಿ ಜನರನ್ನು ಇಬ್ಭಾಗ ಮಾಡಿದರು ಮೇಕೆದಾಟು ವಿಚಾರ ಕೇಂದ್ರ ಸಚಿವರೊಬ್ಬರ ಕೈಯಲ್ಲಿದೆ. ಹಾಗಾಗಿ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಆಗಲಿದೆ. ಇದರಲ್ಲಿ ಯಾರಿಗೂ ತೊಂದರೆಯಾಗುವುದಿಲ್ಲ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನಡೆದುಕೊಳ್ಳಬೇಕು. ಕರ್ನಾಟಕ, ತಮಿಳುನಾಡಿನ ಮುಖ್ಯಮಂತ್ರಿಗಳು ಇದನ್ನೆ ಹೇಳಿದ್ದಾರೆ. ನಾನು ಯೋಜನೆ ಪರವೋ, ವಿರುದ್ಧವೋ ಎನ್ನುವುದು ಮುಖ್ಯವಲ್ಲ ಎಂದು ಹೇಳಿದರು.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024