ರಾಮನಗರ ಜಿಲ್ಲೆಯ ಮುಗ್ಗೂರು ಮತ್ತು ಹನೂರು ಅರಣ್ಯ ವಲಯದಲ್ಲಿರುವ ಒಂಟಿಗುಂಡುವಿನ ಬಳಿ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಮಾಡಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದೆ. ಕೇಂದ್ರ ಸರ್ಕಾರ ಅನುಮತಿ ನೀಡಿದ ಕೂಡಲೇ ಯೋಜನೆ ಪ್ರಾರಂಭಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೋಮವಾರ ತಿಳಿಸಿದರು.
ಮೇಕೆದಾಟು ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ಮಾಡಿದ ಸಚಿವರು, ಅಣೆಕಟ್ಟು ನಿರ್ಮಾಣ ಸಂಬಂಧ ಕೇಂದ್ರದ ಜಲಶಕ್ತಿ ಸಚಿವಾಲಯ ಈಗಾಗಲೇ ಅನುಮತಿ ನೀಡಿದೆ., ಪರಿಸರ ಮತ್ತು ಅರಣ್ಯ ಇಲಾಖೆಗಳ ಅನುಮತಿಗಾಗಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದರು.
ಮೇಕೆದಾಟು ಅಣೆಕಟ್ಟನ್ನು 9000 ಕೋಟಿ ರು ವೆಚ್ಚದಲ್ಲಿ ನಿರ್ಮಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ವಾಸ್ತವ ಅಂಶಗಳ ಮನವರಿಕೆಗಾಗಿ ಮತ್ತು ತ್ವರಿತ ಅನುಮೋದನೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ದೃಷ್ಟಿಯಿಂದ ದೆಹಲಿಗೆ ತೆರಳುವುದಾಗಿ ಸಚಿವರು ಹೇಳಿದರು.
ಸಚಿವ ಜಾರಕಿಹೊಳಿ ಪರಿವೀಕ್ಷಣೆ ನಡೆಸಿ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಎಂ ಎಲ್ ಸಿ ಸಿಪಿ ಯೋಗೇಶ್ವರ್, ಕಾವೇರಿ ನೀರಾವರಿ ನಿಗಮದ ಎಂಡಿ ಜೈಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ