ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್​ – ಬೆಳ್ಳಿ ಪದಕ ಗೆದ್ದ ಕನ್ನಡಿಗ ಐಎಎಸ್​ ಅಧಿಕಾರಿ ಸಾಧನೆ

Team Newsnap
1 Min Read

ಪ್ಯಾರಾಲಿಂಪಿಕ್ಸ್​​​ನಲ್ಲಿ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್​​ನಲ್ಲಿ ಸುಹಾಸ್​​ ಎಲ್​​ ಯತಿರಾಜ್​ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಫೈನಲ್​ ಪಂದ್ಯದಲ್ಲಿ ಫ್ರಾನ್ಸ್​ನ ಲ್ಯೂಕಾಸ್ ಮಜೂರ್ ವಿರುದ್ಧ 21-15, 17-21, 15-21 ಸೆಟ್​​ಗಳಲ್ಲಿ ಸೋಲುಂಡರು.

ಉತ್ತರ ಪ್ರದೇಶದ ಗೌತಮ ನಗರ ಡಿಸಿ ಆಗಿರುವ ಸುಹಾಸ್ ಪ್ಯಾರಾಲಿಂಪಿಕ್ಸ್​​ನಲ್ಲಿ ಪದಕ ಗೆದ್ದ ಮೊದಲ ಐಎಎಸ್​ ಅಧಿಕಾರಿ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದಾರೆ.

ಕಂಪ್ಯೂಟರ್ ಎಂಜಿನಿಯರ್ ಆಗಿದ್ದ ಸುಹಾಸ್ ಅವರು, ಐಎಎಸ್​ ಪಾಸ್​ ಮಾಡಿ 2020ರಿಂದ ಗೌತಮ‌ ನಗರ ಕರ್ತವ್ಯಕ್ಕೆ ನಿಯೋಜನೆಯಾಗಿದ್ದಾರೆ.

ಸುಹಾಸ್​ ಕರ್ನಾಟಕದ ಮೂಲದ ಐಎಎಸ್​ ಅಧಿಕಾರಿ. ಹಾಸನದಲ್ಲಿ ಜನಿಸಿದರು. ಶಿವಮೊಗ್ಗದಲ್ಲಿ ವಿದ್ಯಾ ಅಭ್ಯಾಸ ಮಾಡಿ, 2008ರಲ್ಲಿ ಐಎಎಸ್ ಅಧಿಕಾರಿಯಾಗಿ ಆಯ್ಕೆ ಯಾದರು. ಆಗ್ರಾ, ಪ್ರಯಾಗ್​​ ರಾಜ್​ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.

Share This Article
Leave a comment