ಇಂದು ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ ರವಾನೆ – ಸಿ ಎಂ

Team Newsnap
1 Min Read

ಇಂದು ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಸ್ವಾಮೀಜಿಗಳು ಸಮಾವೇಶ ನಡೆಸುವ ಅಗತ್ಯವಿರಲಿಲ್ಲ. ನನಗೆ ಪಕ್ಷದ ವರಿಷ್ಠರ ಮೇಲೆ ವಿಶ್ವಾಸವಿದೆ ಎಂದು ತಿಳಿಸಿದ ಯಡಿಯೂರಪ್ಪ, ದಲಿತ ಮುಖ್ಯಮಂತ್ರಿ ಮಾಡುವುದು ನಾನಲ್ಲ, ಹೈಕಮಾಂಡ್. ಇವತ್ತು ಸಂಜೆ ಹೈಕಮಾಂಡ್ ನಿಂದ ಯಾವ ಸಂದೇಶ ಬರಲಿದೆ ಎಂಬುದನ್ನು ಕಾದು ನೋಡೋಣ ಎಂದು ಹೇಳಿದರು.

ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಲು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ದೇವರ ದಯೆಯಿಂದ ನಿನ್ನೆ ಮತ್ತು ಇವತ್ತು ಮಳೆ ಕಡಿಮೆಯಾಗಿದೆ. ಎರಡು ದಿನ ಮಳೆ ಕಡಿಮೆಯಾದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿಯೂ ಮಳೆ ಕಡಿಮೆಯಾಗಿದೆ. ಅಲ್ಲಿ ಮಳೆ ಕಡಿಮೆಯಾಗಿರುವುದರಿಂದ ಪ್ರವಾಹ ಇಳಿಮುಖವಾಗುತ್ತಿದೆ.

Share This Article
Leave a comment