Trending

ವಿಧಾನ ಪರಿಷತ್ ಚುನಾವಣೆ: ಅಧಿಸೂಚನೆ ಪ್ರಕಟ : ಮಂಡ್ಯ ಜಿಲ್ಲೆಯಲ್ಲಿ 4025 ಮತದಾರರು

ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅಧಿಸೂಚನೆ ಹೊರಡಿಸಿದ್ದಾರೆ.

ಸೋಮವಾರ ಭದ್ರತಾ ಕೊಠಡಿ ಮತ್ತು ಎಣಿಕಾ ಕೇಂದ್ರಗಳನ್ನು ಗುರುತಿಸಲು ನಗರದ ಸರ್ಕಾರಿ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇಂದಿನಿಂದಲೇ ನಾಮಪತ್ರ ಸಲ್ಲಿಕೆ:

  • ಇಂದಿನಿಂದ (ನ.೧೬) ನ . ೨೩ರವರೆಗೆ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.
  • ನ.೨೪ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
  • ೨೬ರಂದು ಉಮೇದುವಾರಿಕೆ ವಾಪಸ್ ಪಡೆಯಲು ಕೊನೆ ದಿನವಾಗಿದೆ.
  • ಡಿ.೧೦ರಂದು ಬೆಳಿಗ್ಗೆ ೮ರಿಂದ ಸಂಜೆ ೪ರವರೆಗೆ ಮತದಾನ ನಡೆಯಲಿದೆ.
  • ೧೪ರಂದು ಮತ ಎಣಿಕೆ ನಡೆಯಲಿದೆ.
  • ೧೬ರಂದು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
  • ನಾಲ್ಕು ನಾಮಪತ್ರ ಸಲ್ಲಿಕೆಗೆ ಅವಕಾಶ:
  • ಒಬ್ಬ ಅಭ್ಯರ್ಥಿ ಗರಿಷ್ಠ ೪ ನಾಮಪತ್ರ ಸಲ್ಲಿಸಬಹುದಾಗಿದೆ.
  • ನಾಮಪತ್ರದ ಜತೆಗೆ ಆಸ್ತಿ ವಿವರಗಳನ್ನು ಸಲ್ಲಿಸಬೇಕು.
  • ಅಭ್ಯರ್ಥಿಯ ವಯಸ್ಸು ೩೦ ವರ್ಷಗಳಿಗೆ ಕಡಿಮೆ ಇರಬಾರದು.
  • ೧೦ ಮತದಾರರ ಸೂಚಕ ಸಹಿ ಇರಬೇಕು.
  • ಸಾಮಾನ್ಯ ಅಭ್ಯರ್ಥಿ ೧೦ ಸಾವಿರ ರೂ. ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ ೫ ಸಾವಿರ ರೂ. ಠೇವಣಿ ಇಡಬೇಕು.
  • ಜಿಲ್ಲೆಯಲ್ಲಿ ೪೦೨೫ ಮತದಾರರು:
  • ಮಂಡ್ಯ ನಗರಸಭೆ ಸದಸ್ಯರು, ಆರು ತಾಲೂಕುಗಳ ಪುರಸಭೆ ಸದಸ್ಯರು, ಬೆಳ್ಳೂರು ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಜಿಲ್ಲೆಯ ೨೩೨ ಗ್ರಾಮ ಪಂಚಾಯಿತಿಗಳ ಸದಸ್ಯರು ಮತದಾನದ ಹಕ್ಕು ಹೊಂದಿದ್ದಾರೆ.
  • ಜಿಲ್ಲೆಯಲ್ಲಿ ಒಟ್ಟು ೪೦೨೫ ಮತದಾರರಿದ್ದಾರೆ.
  • ಇದರಲ್ಲಿ ಗ್ರಾಮ ಪಂಚಾಯಿತಿಯ ೩೮೧೮ ಸದಸ್ಯರು,
  • ಮಂಡ್ಯ ನಗರಸಭೆ ೩೫,
  • ಆರು ತಾಲೂಕುಗಳ ಪುರಸಭೆಯ ೧೫೧,
  • ಬೆಳ್ಳೂರು ಪಟ್ಟಣ ಪಂಚಾಯಿತಿ ೧೩,
  • ಒಬ್ಬರು ಸಂಸದರು, ೭ ಮಂದಿ ಶಾಸಕರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ.
Team Newsnap
Leave a Comment
Share
Published by
Team Newsnap

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024